Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ -ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ -ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

    April 27, 2023
    Share

    ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21 ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ, ಬೆದರಿಕೆ ಒಡ್ಡಿ, ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ. ಬಳಿಕ ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು, ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡದಂತೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.