ಕಡಬ: ಬಾರ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊರ್ವ 6,57,104 ಮೌಲ್ಯದ ಮಧ್ಯ ಮಾರಾಟ ಮಾಡಿ ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾದ ಘಟನೆ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ.
ವಿಶಾಲ್ ಸ್ಟೀಫನ್(25) ಬಿಳಿನೆಲೆ ಗ್ರಾಮ ಕಡಬ ಎಂಬವರ ದೂರಿನಂತೆ ಅವರ ತಾಯಿ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ನಲ್ಲಿ ಕಡಬ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ ಕೆ ಎಂಬಾತನು ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನೇ ದಿನನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿದ್ದ.
ಡಿ.21ರಂದು ರಾತ್ರಿ ವಿಶಾಲ್ ಸ್ಟೀಫನ್ರವರು ಬಾರಿನ ವಹಿವಾಟು ಬಗ್ಗೆ ಪರಿಶೀಲನೆ ನಡೆಸಿದಾಗ ವಹಿವಾಟಿನಲ್ಲಿ ವ್ಯತ್ಯಯ ಕಂಡುಬಂದಿರುತ್ತದೆ. ಈ ಬಗ್ಗೆ ಹರ್ಷಿತ್ ಬಳಿ ವಿಚಾರಿಸಿದಾಗ ಮರುದಿನ ಡಿ.22ರಂದು ಸರಿಯಾಗಲಿದೆ ಹಾಗೂ ವ್ಯಾಪಾರದ ನಗದನ್ನು ಮರುದಿನವೇ ಬ್ಯಾಂಕಿನಲ್ಲಿ ಜಮೆ ಮಾಡುವುದಾಗಿ ತಿಳಿಸಿರುತ್ತಾನೆ. ಆದರೆ ಮರುದಿನ ಹಣ ಜಮೆಯಾಗದಿರುವುದರಿಂದ ಆತನ ಬಳಿ ವಿಚಾರಿಸಲು ಆತ ವಾಸ್ತವ್ಯವಿದ್ದ ಕೊಠಡಿಗೆ ಹೋದಾಗ ಆತನು ನಾಪತ್ತೆಯಾಗಿರುತ್ತಾನೆ. ಈ ಬಗ್ಗೆ ಸಂಶಯಗೊಂಡು ಪರಿಶೀಲಿಸಿದಾಗ ಸ್ಟೋಕ್ ರೂಮ್ನಲ್ಲಿದ್ದ ಸುಮಾರು 6,57,104 ಮೌಲ್ಯದ ಮಧ್ಯವನ್ನು ಈ ಮೊದಲೇ ಆರೋಪಿಯು ಮಾರಾಟ ಮಾಡಿ ಆ ಮೊತ್ತವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚಿಸಿರುವುದು ಡಿ.21ರಂದು ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾಗಿರುವುದು ಕಂಡುಬಂದಿರುತ್ತದೆ.
ಈ ಬಗ್ಗೆ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 94/2025. ಕಲಂ: 303(2), 314, 316(4) BNS-2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




