Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

    October 15, 2025
    Share

    ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ.

    ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ ಬೆಂಗಳೂರಿನಲ್ಲಿ ಕಂಬಳ ನಡೆದಿರಲಿಲ್ಲ. ಇದೀಗ ಹೈಕೋರ್ಟ್‌ ಕಂಬಳಕ್ಕೆ ಗ್ರೀನ್‌ ಸಿಗ್ನಲ್‌ ನೀಡಿರುವುದರಿಂದ ಈ ವರ್ಷ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆಯೇ ಎಂಬ ಕುತೂಹಲವಿದೆ.

    ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಹೈಕೋರ್ಟ್‌ ತೀರ್ಪಿನಿಂದ ಮೊದಲ ಜಯ ಸಿಕ್ಕಂತಾಗಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.

    ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರ್ಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು. ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಶಿಯೇಶನ್‌ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

    Post Views: 196

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.