Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೆತ್ತಿಕಲ್ಲು ಅವೈಜ್ಞಾನಿಕ ಕಾಮಗಾರಿ- ಎನ್‌ಎಚ್‌ಐ, ಡಿಬಿಎಲ್‌, ಜಾಗದ ಮಾಲಕನ ವಿರುದ್ಧ ಕೇಸು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಕೆತ್ತಿಕಲ್ಲು ಅವೈಜ್ಞಾನಿಕ ಕಾಮಗಾರಿ- ಎನ್‌ಎಚ್‌ಐ, ಡಿಬಿಎಲ್‌, ಜಾಗದ ಮಾಲಕನ ವಿರುದ್ಧ ಕೇಸು ದಾಖಲು

    August 16, 2024
    Share

    ಮಂಗಳೂರು : ಕೆತ್ತಿಕಲ್ಲು ಭೂಕುಸಿತ ಪ್ರದೇಶದಲ್ಲಿ ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲಕರು ಮತ್ತು ಎನ್‌ಎಚ್‌ಐನವರು ಅನುಮತಿಸಿದ ಡಿಬಿಎಲ್ ಕಂಪೆನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಎಂಎಂಡಿಆರ್ ಕಾಯಿದೆ-1957ರಡಿ ಪ್ರಕರಣ ದಾಖಲಿಸಲಾಗಿದೆ. ಸುರಕ್ಷತೆಗೆ ಅಪಾಯವಿರುವುದರಿಂದ ವೆಟ್‌ವೆಲ್‌ನ ಮನಪಾದಿಂದಲೂ ಕ್ರಿಮಿನಲ್ ಕ್ರಮಕ್ಕಾಗಿ ಪೊಲೀಸ್ ತನಿಖೆಯನ್ನು ನಡೆಸಲು ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಸೆಂಟ್ರಲ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರನ್ನು ತನಿಖಾಧಿಕಾರಿಯನ್ನಾಗಿ ಪೊಲೀಸ್ ಆಯುಕ್ತರು ನೇಮಿಸಿದ್ದಾರೆ. ಜಿಯೋಲಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಸಲಹೆಯಂತೆ, ಘಟನಾ ಸ್ಥಳದಲ್ಲಿ ನೀರಿನ ಸಂಗ್ರಹ ಆಗದಂತೆ, ಚರಂಡಿ ಮಾಡಿ ಕಾಂಕ್ರೀಟ್ ಬಾಕ್ಸ್ ಬಳಸಿ, ನೀರು ಮಣ್ಣಿನ ಒಳಗೆ ನುಗ್ಗದೆ, ಹರಿದು ಹೋಗುವ ರೀತಿಯಲ್ಲಿ ಈಗಾಗಲೆ ವ್ಯವಸ್ಥೆ ಮಾಡಲಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಗರಿಷ್ಠ ಮಣ್ಣು ಅಗೆಯುವಿಕೆ ನಡೆದಿರುವುದಾಗಿ ಎನ್ ಎಚ್ ಎಐ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹಾಗೂ ಜಿ ಎಸ್ ಐ ಉಪಗ್ರಹದ ಛಾಯಚಿತ್ರಗಳ ಮೂಲಕ ತಿಳಿಯುತ್ತದೆ. ಈ ಬಗ್ಗೆ ಸಾಕ್ಷಿಯಾಗಿ 2022 ಡಿಸೆಂಬರ್ ನ ವಿಡಿಯೋವನ್ನು ಅದರ ಎನ್ಎಚ್ಎಐ ಒದಗಿಸಿದೆ. ಮಣ್ಣು ಅಗೆದ ಚಟುವಟಿಕೆಗಳ ಬಗ್ಗೆ ಉನ್ನತಮಟ್ಟದ ತನಿಖೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರಂಭವಾಗಿದ್ದು, ಇಲಾಖಾಧಿಕಾರಿಗಳು, ಎನ್ಎಚ್ಎಐ, ಡಿಪಿಎಲ್ ಕಂಪೆನಿ, ಭೂಮಾಲೀಕರು ಅಗತ್ಯ ದಾಖಲೆಗಳನ್ನು ಮಂಡಿಸಿದ್ದಾರೆ. ಭೂಕುಸಿತ ಪ್ರದೇಶದ ನಿವಾಸಿಗಳ ಹಿತದೃಷ್ಟಿಯಿಂದ ಸಂತ್ರಸ್ತರನ್ನು ಬೇರೆಕಡೆ ಸ್ಥಳಾಂತರ ಮಾಡಲಾಗಿದೆ. ಅವರಿಗೆ 10 ಸಾವಿರ ದಿಂದ 20 ಸಾವಿರ ರೂ. ವರೆಗೆ ತಾತ್ಕಾಲಿಕ ಪರಿಹಾರ ಪಾವತಿ ಮಾಡಲಾಗಿದೆ. ಈ ಪ್ರದೇಶದಲ್ಲಿ ಮೇಲಿನಿಂದ ಕೆಳಗೆ ಹರಿಯುವ ನೀರನ್ನು ಭೂಕುಸಿತ ಪ್ರದೇಶದ ವಿರುದ್ಧ ದಿಕ್ಕಿಗೆ ಹರಿದು ಹೋಗುವಂತೆ ಚರಂಡಿ ವ್ಯವಸ್ಥೆ ಕಾರ್ಯಗತಗೊಳಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ವರದಿ ಸಲ್ಲಿಸಿದ್ದಾರೆ.

    Post Views: 265

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.