Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವಕನ ಕಿಡ್ನಾಪ್ & ಕೊಲೆ ಪ್ರಕರಣ ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ
    ಇತ್ತೀಚಿನ ಸುದ್ದಿ

    ಯುವಕನ ಕಿಡ್ನಾಪ್ & ಕೊಲೆ ಪ್ರಕರಣ ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ

    January 4, 2023
    Share

    ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.

    ಘಟನೆಯ ಹಿನ್ನೆಲೆ : ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ‌ ಮನವಿ‌ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದ.ಇದರಿಂದ ಇಲ್ಲಿಂದ ಶರತ್ ಕಿಡ್ನಾಪ್ ಆ್ಯಂಡ್ ಮರ್ಡರ್ ಪ್ಲಾನ್ ಆರಂಭವಾಯಿತು ಎಂದು ಕೇಳಿ ಬರುತ್ತಿದೆ.

    ಮುಖಂಡರ ಹಾಗೂ ಆತನ‌ ಸ್ನೇಹಿತರು, ಜತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್‌ ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್ ನಿಂದಲೇ ಯುವಕನ ತಂದೆ ತಾಯಿಗೆ ‘ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್’ ಹಾಕಿ ಬಳಿಕ ಮೊಬೈಲನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು. ಇಷ್ಟರಲ್ಲಿ ಶರತ್‌ ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
    ಕೊಲೆಯಾದ ಶರತ್‌ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪತ್ರ‌ ನೀಡಿದ ಸುಳಿವು: ಈ ಕಿಡ್ನಾಪ್,ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.‌ ಬಳಿಕ‌ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು ಇಬ್ಬರು ಆರೋಪಿಗಳನ್ನು, ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆತಂದು ಶವ ಹುಡುಕಲು ಮುಂದಾಗಿದ್ದಾರೆ.

    ಶವ ಹುಡುಕುವುದೇ ಸವಾಲು:
    ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ
    ಚಾರ್ಮಾಡಿ ಘಾಟಿ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ.ಘಾಟಿಯ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ, ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆಯು ಇದೆ.

    Post Views: 227

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.