ಮಂಗಳೂರು : ಕಾರಿನಲ್ಲಿ ಆಗಮಿಸಿದ ತಂಡವೊಂದು ನಗರದ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನನ್ನು ಬಲವಂತವಾಗಿ ಅಪಹರಿಸಿ, ತಡೆಯಲು ಬಂದ ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ಗಡಿ ಭಾಗದ ಕಾಸರಗೋಡು ನಗರದ ಚಕ್ಕರ ಬಝಾರ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೊಲ್ಲಂಪಾಡಿಯ ಎ.ಶಾನ್ನವಾಝ್ (38), ತಳಂಗರೆ ಬಾಂಗೋಡ್ನ ಅಬ್ದುಲ್ ಮನಾಫ್ ಎ.ಎಂ.(21), ಅಣಂಗೂರಿನ ಮುಹಮ್ಮದ್ ರಿಯಾಝ್ (25) ಬಂಧಿತ ಆರೋಪಿಗಳು. ಆರೋಪಿಗಳು ಕಾರಿನಲ್ಲಿ ಆಗಮಿಸಿ ಅಂಗಡಿಗೆ ನುಗ್ಗಿ ಮುಟ್ಟತ್ತೋಡಿಯ ಸವಾದ್ ಎಂಬಾತನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿಕೊಂಡೊಯ್ದಿದ್ದು, ತಡೆಯಲೆತ್ನಿಸಿದ ತಂದೆ ವಿ.ಎಂ.ಅಬೂಬಕರ್ಗೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)