Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕನ ಅಪಹರಣ, ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಅಪಹರಣ, ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

    January 22, 2023
    Share

    ಮಂಗಳೂರು:  ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ.

    ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರೂಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ಅನುಮಾನಾಸ್ಪದವಾಗಿ ನಿಂತಿದ್ದವರನ್ನು ಐವರನ್ನು ಪ್ರಶ್ನಿಸಿದ್ದರು. ಈ ವೇಳೆ ಐವರು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದರು.

    ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನ ರೌಡಿ ಶೀಟರ್ ಒಬ್ಬನ ಸೂಚನೆಯಂತೆ ಉಪ್ಪಿನಂಗಡಿಯ ಕೊಯಿಲ ನಿವಾಸಿ ಶಾರೂಕ್‌ ನನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಐವರು ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ರೌಡಿ ಶೀಟರ್ ಒಬ್ಬನ ನಿರ್ದೇಶನದ ಮೇರೆಗೆ ಶಾರೂಖ್ ನನ್ನು ಕಿಡ್ನಾಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

    Post Views: 235

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.