ಪುಣೆ: ಪುಣೆಯ ದೀನನಾಥ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಫೋಟಿಸಿ ಹತ್ಯೆ ಮಾಡಲಾಗುತ್ತದೆ. ಜೊತೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ನಲ್ಲಿ ಬೆದರಿಕೆಯನ್ನು ವಿದೇಶದಿಂದ ಕಳುಹಿಸಿ ಹಾಕಲಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ನಾನು ಅನೇಕ ಭಯೋತ್ಪಾದಕ ಸಂಘಟನೆಗಳಿಗೆ ಧನಸಹಾಯ ನೀಡುತ್ತಿದ್ದೇನೆ ಮತ್ತು ಹಿಂದೂ ಮಹಿಳೆಯರು ಮತ್ತು ಹಿಂದೂಗಳನ್ನು ದೇಶದಿಂದ ನಾಶಪಡಿಸಲು ಪ್ರಯತ್ನಿಸುತ್ತಿದ್ದೇನೆ ಎಂಬುದಾಗಿ ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.
ಆರೋಪಿಯು ಜಿಮೇಲ್ ಬಳಕೆದಾರ ಮೋಖಿಮ್ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದು, ದೇಶದ ಅನೇಕ ಸ್ಥಳಗಳಲ್ಲಿ ಸಾವಿಗೆ ಕಾರಣವಾಗುವುದಾಗಿ ಬೆದರಿಕೆ ಹಾಕಿದ್ದಾನೆ. ಸಂದೇಶವನ್ನು ಸ್ವೀಕರಿಸಿದ ವ್ಯಕ್ತಿಯು ಪುಣೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿದೇಶದಿಂದ ಕಳುಹಿಸಿರುವಂತ ಇ-ಮೇಲ್ ನಲ್ಲಿ ಏನಿದೆ.?
ನಾನು ಹಲವು ಭಯೋತ್ಪಾದಕ ಸಂಘಟನೆಗಳಿಗೆ ಧನ ಸಹಾಯ ಮಾಡಿದ್ದೇನೆ. ಕೆಲ ಧರ್ಮಗಳ ಜನರನ್ನು ದೇಶದಿಂದ ನಿರ್ನಾಮ ಮಾಡಲು ಪ್ರಯತ್ನಿಸುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆಗೈಯ್ಯಲಾಗುತ್ತದೆ. ಇದಲ್ಲದೇ ಭಾರತದ ವಿವಿಧೆಡೆ ಬಾಂಬ್ ಸ್ಪೋಟ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಲಾಗಿದೆ.