Facebook Twitter Instagram
    Sunday, June 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ
    ಇತ್ತೀಚಿನ ಸುದ್ದಿ

    BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ

    November 17, 2024
    Share

    ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ.

    ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ ಇದರ ಜೊತೆಗೆ ವಾರಕ್ಕೊಮ್ಮೆ ಹೆಚ್ಚುವರಿ ರೈಲು ಸಹ ಸಂಚರಿಸಲಿದೆ.

    ಹುಬ್ಬಳ್ಳಿ ಹಾಗೂ ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
    ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
    ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
    2 ಎಸಿ ಟು ಟೈರ್ ​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

    ಇನ್ನು ಹೆಚ್ಚುವರಿಯಾಗಿ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

    ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
    ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ.

    ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆಯಾಗಲಿದೆ.

    Post Views: 143

    Related Posts

    ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ

    June 1, 2025

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.