Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯಾಳ ಊರಿಗೆ ಸರ್ಕಾರಿ ಬಸ್…! ಧರ್ಮಸ್ಥಳದಿಂದ ಪಾಂಗಳಕ್ಕೆ ಸರಕಾರಿ ಬಸ್ ಚಾಲನೆ ನೀಡಿದ ಸೌಜನ್ಯ ತಾಯಿ
    ಇತ್ತೀಚಿನ ಸುದ್ದಿ

    ಸೌಜನ್ಯಾಳ ಊರಿಗೆ ಸರ್ಕಾರಿ ಬಸ್…! ಧರ್ಮಸ್ಥಳದಿಂದ ಪಾಂಗಳಕ್ಕೆ ಸರಕಾರಿ ಬಸ್ ಚಾಲನೆ ನೀಡಿದ ಸೌಜನ್ಯ ತಾಯಿ

    September 1, 2023
    Share

    ಸೌಜನ್ಯಾಳ ಊರಿಗೆ ಸರ್ಕಾರಿ ಬಸ್ ..ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಹೊಸ ಬಸ್ ಓಡಾಟಕ್ಕೆ ಇಂದು, ಸೆಪ್ಟಂಬರ್ 1 ರ, ಶುಕ್ರವಾರ ಚಾಲನೆ ದೊರಕಿದೆ. ಈ ಬಸ್ ಸಂಚಾರಕ್ಕೆ ಸೌಜನ್ಯ ತಾಯಿ ಕುಸುಮಾವತಿ ಚಾಲನೆ ನೀಡಿದರು. ಸೌಜನ್ಯ ಮಾವ ಪುರಂದರ ಗೌಡ, ಅಜ್ಜ ಬಾಬು ಗೌಡ, ರಮೇಶ್, ತುಕಾರಾಮ್, ಶೇಖರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ 8:15 ಕ್ಕೆ ಧರ್ಮಸ್ಥಳದಿಂದ ಹೊರಟ ಬಸ್ ಪಾಂಗಾಳಕ್ಕೆ ಬಂತು. ಅದು ಅಲ್ಲಿಂದ ಜನರನ್ನು ಕರೆದುಕೊಂಡು ವಾಪಸ್ ಧರ್ಮಸ್ಥಳಕ್ಕೆ ಬರುತ್ತದೆ. ಮತ್ತೆ ಸಂಜೆ 4:15 ಕ್ಕೆ ಧರ್ಮಸ್ಥಳದಿಂದ ಪಾಂಗಳಕ್ಕೆ ಬಂದು ಅಲ್ಲಿಂದ ಬಸ್ ಮತ್ತೆ ಧರ್ಮಸ್ಥಳಕ್ಕೆ ಹೊರಡಲಿದೆ. ಇದೇ ಮೊದಲ ಬಾರಿಗೆ ಬಸ್ ಸಂಚಾರವನ್ನು ಪಾಂಗಾಳಕ್ಕೆ ಕಲ್ಪಿಸಿರುವುದು ವಿಶೇಷ. ಮಂಗಳ ಬಸ್ತ್ ನಿಲ್ದಾಣದಿಂದ ಸೌಜನ್ಯ ಮನೆ ಕೇವಲ ಐನೂರು ಮೀಟರ್ ಗಳ ದೂರದಲ್ಲಿದೆ.

    ಧರ್ಮಸ್ಥಳದಿಂದ ಪಾಂಗಳಕ್ಕೆ ಸರಕಾರಿ ಬಸ್ ಚಾಲನೆ ನೀಡಿದ ಸೌಜನ್ಯ ತಾಯಿ  11 ವರ್ಷಗಳ ಹಿಂದೆ ಕಾಲೇಜು ಮುಗಿಸಿ ಪಾಂಗಾಳ ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ಸೌಜನ್ಯಳನ್ನು ಎಳೆದೊಯ್ದು ಅತ್ಯಾಚಾರ ನಡೆಸಿ ಬಳಿಕ ಕೊಲೆಗೈಯಲಾಗಿತ್ತು. ನಂತರ ಆಕೆಯ ಶವವನ್ನು ಮಣ್ಣ ಸಂಕ ಎಂಬಲ್ಲಿ ಎಸೆಯಲಾಗಿತ್ತು. ಕಾಡಿನಿಂದ ಸುತ್ತುವರಿದ ನಿರ್ಜನ ಪ್ರದೇಶವಾದ ಪಂಗಾಳಕ್ಕೆ ಹೋಗುವ ರಸ್ತೆಯ ಈ ಭಾಗಕ್ಕೆ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಬೇಕು, ಕಾಲೇಜಿಗೆ ತೆರಳುವ ಯುವತಿಯರಿಗೆ ರಕ್ಷಣೆ ನೀಡಬೇಕು ಅನ್ನುವುದು ಸ್ಥಳೀಯರ ಬಹುದಿನದ ಬೇಡಿಕೆಯಾಗಿತ್ತು. ಆದರೆ ಯಾವ ‘ಅಧಿಕಾರಿ ‘ ಕೂಡ ಈ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಮೊನ್ನೆ ಬಂದ ಮಕ್ಕಳ ಆಯೋಗದ ಅಧ್ಯಕ್ಷರ ಸೂಚನೆಯ ಮೇರೆಗೆ ಸೌಜನ್ಯ ಊರು ಪಾಂಗಲಕ್ಕೆ ಹೊಸ ಸರ್ಕಾರಿ ಬಸ್ ಬಂದಿದೆ. ಈ ಬಸ್ ವ್ಯವಸ್ಥೆಯನ್ನು ಕಲ್ಪಿಸಿರುವುದು ಸ್ಥಳೀಯರಲ್ಲಿ ಸಂತಸವನ್ನು ಮೂಡಿಸಿದ್ದು, ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನರು ಕೃತಜ್ಞತೆಯನ್ನು ಹೇಳಿದ್ದಾರೆ.

    Post Views: 272

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.