Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026
    Share

    ಮಂಗಳೂರು : ಸರ್ಕಾರಿ ಬಸ್‌ನಲ್ಲಿ ಹಗ್ಗ ಎಳೆದದ್ದನ್ನು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನೊಬ್ಬ ಕೇರಳ ಸಾರಿಗೆ ಬಸ್ ಕಂಡಕ್ಟರ್ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆದಿದೆ. ಕೇರಳ ರಾಜ್ಯದ ಕೆಎಸ್‌ಆರ್‌ಟಿಸಿ ಕಾಸರಗೋಡು ವಿಭಾಗದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶನ್ ಕೆ.ಪಿ (52) ಹಲ್ಲೆಗೊಳಗಾದ ಸಿಬ್ಬಂದಿ

    ಸೆಪ್ಟೆಂಬರ್ 12ರಂದು ರಾತ್ರಿ 9:30ಕ್ಕೆ ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೊರಟಿದ್ದ ‘KL 15 A 1044’ ನೋಂದಣಿ ಸಂಖ್ಯೆಯ ಬಸ್‌ನಲ್ಲಿ ಸತೀಶನ್ ಕಂಡಕ್ಟರ್ ಆಗಿ ಹಾಗೂ ಸುರೇಶ್ ಎಂ.ಪಿ ಚಾಲಕರಾಗಿ ಕರ್ತವ್ಯದಲ್ಲಿದ್ದರು. ರಾತ್ರಿ 10:20ರ ಸುಮಾರಿಗೆ ಬಸ್ ತೊಕ್ಕೊಟ್ಟು ಬಸ್ ನಿಲ್ದಾಣಕ್ಕೆ ಬಂದಾಗ ತಾರಾನಾಥ ಎಂಬ ಆರೋಪಿ ಬಸ್ ಏರಿದ್ದನು.

    ಬಸ್ ಮುಂಚಲಿಸುತ್ತಿದ್ದಂತೆ ಆರೋಪಿ ತಾರಾನಾಥ ಏಕಾಏಕಿ ಬಸ್‌ನಲ್ಲಿದ್ದ ಸ್ಟಾಪ್ ಬೆಲ್‌ನ ಹಗ್ಗವನ್ನು ಎಳೆದಿದ್ದಾನೆ. ಇದನ್ನು ಕಂಡಕ್ಟರ್ ಸತೀಶನ್ ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಆರೋಪಿ, “ಬೇವರ್ಷಿ, ನೀವು ಕೇರಳದವರು, ನಿಮಗೆ ಬಾರಿ ಅಹಂಕಾರ” ಎಂದು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಕೋಪೋದ್ರಿಕ್ತನಾದ ಆರೋಪಿ ತಾರಾನಾಥ, ಕಂಡಕ್ಟರ್ ಸತೀಶನ್ ಅವರ ಕೆನ್ನೆಗೆ ಹೊಡೆದು, ತನ್ನ ಕೈಯಲ್ಲಿದ್ದ ಸ್ಟೀಲ್ ಬಳೆಯಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿ ತೀವ್ರ ಗಾಯಗೊಳಿಸಿದ್ದಾನೆ. ಈ ವೇಳೆ ಬಿಡಿಸಲು ಬಂದ ಚಾಲಕ ಸುರೇಶ್ ಅವರ ಕೆನ್ನೆ ಹಾಗೂ ತಲೆಗೂ ಕೈಯಿಂದ ಹೊಡೆದು, ಇಬ್ಬರೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.

    ಹಲ್ಲೆಯಿಂದ ಗಾಯಗೊಂಡ ಕಂಡಕ್ಟರ್ ಸತೀಶನ್ ಅವರನ್ನು ತಕ್ಷಣವೇ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

    Post Views: 6

    Related Posts

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.