Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಗಲಾಟೆ- ಬಿಯರ್‌ ಬಾಟಲಿಯಿಂದ ಹಲ್ಲೆ
    ಇತ್ತೀಚಿನ ಸುದ್ದಿ

    ಮಂಗಳೂರು: ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಗಲಾಟೆ- ಬಿಯರ್‌ ಬಾಟಲಿಯಿಂದ ಹಲ್ಲೆ

    January 13, 2025
    Share

    ಬಿಯರ್‌ ಬಾಟಲಿಯಿಂದ ಇತ್ತಂಡಗಳ ನಡುವೆ ಹಲ್ಲೆ ನಡೆದಿರುವ ಘಟನೆಯೊಂದು ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೈಟರ್‌ ವಿಚಾರಕ್ಕೆ ವಾಗ್ವಾದ ನಡೆದು, ಗಲಾಟೆ ಪ್ರಾರಂಭವಾಗಿ ಹೊಡೆದಾಟ, ಹಲ್ಲೆ ನಡೆದಿದೆ.

    ಭಾನುವಾರ (ಜ.12) 11.45 ರ ತಡರಾತ್ರಿ ಈ ಘಟನೆ ನಡೆದಿದೆ. ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣೀರುಬಾವಿ ಎಂಬಲ್ಲಿ ವೆಂಕಟೇಶ, ಕಾರ್ತಿಕ್‌, ಸಂತೋಷ್‌, ಸೈಫ್‌, ಧನುಷ್‌ ಇವರುಗಳು ಮದ್ಯಪಾನ ಮಾಡಿ ಸಿಗರೇಟು ಸೇದುತ್ತಿದ್ದಾಗ ಅವರಿದ್ದ ಸ್ಥಳಕ್ಕೆ ಬಂದ ಪ್ರೀತಂ ಮತ್ತು ಸನ್ವೀತ್‌ ಹಾಗೂ ಇತರರು ಸಿಗಾರ್‌ ಲೈಟರ್‌ ಕೇಳಿದ್ದು, ಈ ವೇಳೆ ಪ್ರಜ್ವಲ್‌ ಲೈಟರ್‌ ಪ್ರೀತಂಗೆ ನೀಡಿದ್ದು, ಅನಂತರ ವಾಪಾಸು ನೀಡದ್ದಕ್ಕೆ ಪ್ರಜ್ವಲ್‌ ಪ್ರಶ್ನೆ ಮಾಡಿದ್ದಾನೆ.

    ಇದಕ್ಕೆ ಇನ್ನೊಂದು ಗುಂಪು ಸಿಟ್ಟಿಗೆದ್ದಿದ್ದು, ನೀವು ಯಾಕೆ ಧಮ್ಕಿ ಹಾಕುತ್ತೀರಿ ಎಂದು ಪ್ರಜ್ವಲ್‌ ಜೊತೆಗಿದ್ದ ಕಾರ್ತಿಕ್‌ ತಲೆಗೆ ಬಿಯರ್‌ ಬಾಟಲಿಯಿಂದ ಹೊಡೆದಿದ್ದು, ಅವರ ಜೊತೆಗಿದ್ದ ಐದು ಜನರು ಅಲ್ಲೇ ಇದ್ದ ಮರದ ಕೋಲುಗಳಿಂದ ಪ್ರಜ್ವಲ್‌, ಕಾರ್ತಿಕ್‌, ಸಂತೋಷ್‌, ಸೈಫ್‌, ಧನುಷ್‌ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಹಾಗಾಗಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಣಂಬೂರು ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

    ಪ್ರೀತಂ ಎಂಬಾತ ದೂರು ನೀಡಿದ್ದು, ಬಿ.ಎನ್‌.ಎಸ್‌ ಪ್ರಕಾರ ಪ್ರಕರಣ ದಾಖಲಾಗಿದ್ದು, ಇದರಲ್ಲಿ ವೆಂಕಟೇಶ್‌, ಕಾರ್ತಿಕ್‌, ಸಂತೋಷ್‌, ಸೈಪ್‌, ಧನುಷ್‌, ಪ್ರಜ್ವಲ್‌ ಇವರು ಆರೋಪಿಗಳಾಗಿದ್ದು, ಇವರಲ್ಲಿ ಕಾರ್ತಿಕ್‌, ಸಂತೋಷ್‌, ಧನುಷ್‌, ಪ್ರಜ್ವಲ್‌ ಇವರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

    Post Views: 218

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.