Facebook Twitter Instagram
    Saturday, August 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ
    ಇತ್ತೀಚಿನ ಸುದ್ದಿ

    ಮಂಗಳೂರು: ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ

    August 1, 2026
    Share

    ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಸೆಂಟೆನಿಯಲ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕದ್ರಿ ಪಾರ್ಕ್ ಸಮೀಪದ ಲಯನ್ಸ್ ಅಶೋಕ ಭವನದಲ್ಲಿ ನಡೆಯಿತು.

    ಸಮಾರಂಭದಲ್ಲಿ ಲಯನ್ ಅಮಲ್ ಮರಿಯಾ ಇಸಬೆಲ್ಲಾ ಕ್ವಾಡ್ರೋಸ್ (PMJF) ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಲಯನ್ ಸ್ವರೂಪ್ ಎನ್. ಶೆಟ್ಟಿ (PMJF) ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರದ ಪ್ರಮಾಣವಚನ ಬೋಧಿಸಿ, ಐವರು ನೂತನ ಸದಸ್ಯರನ್ನು ಲಯನ್ಸ್ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಕ್ಲಬ್ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ ಇನ್ನಷ್ಟು ಅರ್ಥಪೂರ್ಣ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಶುಭ ಹಾರೈಸಿದರು.

    ನೂತನ ಕಾರ್ಯಕಾರಿ ಸಮಿತಿಯಲ್ಲಿ ರಿಚರ್ಡ್ ಪಿಂಟೋ ಕಾರ್ಯದರ್ಶಿಯಾಗಿ, ಸುರೇಶ್ ಮೊಂತೇರೊ ಖಜಾಂಚಿಯಾಗಿ, ಹೆರಾಲ್ಡ್ ಡಿ’ಕುನ್ಹಾ ಹಾಗೂ ಲಾರೆನ್ಸ್ ಲೋಬೊ ಉಪಾಧ್ಯಕ್ಷರಾಗಿ, ಡಯಾನಾ ಶಾನ್‌ಭೋಗ್, ವಿನ್ಸೆಂಟ್ ಪಿರೇರಾ (ಜನಸಂಪರ್ಕಾಧಿಕಾರಿ), ತೇಜಾಕ್ಷಿ ಸುವರ್ಣ, ಹಿಲ್ಡಾ ಉರ್ವಾ, ಜಸಿಂತಾ ಲೋಬೊ, ಶ್ರೀರಾಮ್ ರೈ, ಆಂಡ್ರಿಯಾ ಫೆರ್ನಾಂಡಿಸ್ ಹಾಗೂ ಉಜ್ವಲ್ ಡಿ’ಕುನ್ಹಾ ವಿವಿಧ ಹುದ್ದೆಗಳಿಗೆ ಅಧಿಕಾರ ಸ್ವೀಕರಿಸಿದರು.

    ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ (PMJF), ಪ್ರಾದೇಶಿಕ ಅಧ್ಯಕ್ಷ ಜಯರಾಜ್ ಪ್ರಕಾಶ್ ಹಾಗೂ ವಲಯ ಅಧ್ಯಕ್ಷ ಗಣೇಶ್ ಸಾಲ್ಯಾನ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ, ಕ್ಲಬ್‌ನ ಸಮಾಜಮುಖಿ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

    ಈ ಸಂದರ್ಭದಲ್ಲಿ ಸುಮಾರು ₹2.50 ಲಕ್ಷ ಮೌಲ್ಯದ ವಿವಿಧ ಸೇವಾ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಸುಬೇದಾರ್ ಭರತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಆಯೋಜನೆಯಲ್ಲಿ ವಲಯ ಎನ್ವಾಯ್ ಲಾರೆನ್ಸ್ ಲೋಬೊ ಸಹಕರಿಸಿದರು. ಜನಸಂಪರ್ಕಾಧಿಕಾರಿ ವಿನ್ಸೆಂಟ್ ಪಿರೇರಾ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಮೊಂತೇರೊ ವಂದನಾರ್ಪಣೆ ಸಲ್ಲಿಸಿದರು. ವಿವಿಧ ಲಯನ್ಸ್ ಕ್ಲಬ್‌ಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ನೂತನ ತಂಡಕ್ಕೆ ಶುಭ ಹಾರೈಸಿದರು. ಬಳಿಕ ಪ್ರತಿಭಾ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

    Post Views: 13

    Related Posts

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!

    August 1, 2026

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!

    August 1, 2026

    ಮಂಗಳೂರು: ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ

    August 1, 2026

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.