Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆ
    ಇತ್ತೀಚಿನ ಸುದ್ದಿ

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆ

    October 31, 2024
    Share

    ಬಂಟ್ವಾಳ: ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು ಕಲೆಯನ್ನೇ ಬದುಕಾಗಿಸಿಕೊಂಡವರು. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ವರ್ಷದಲ್ಲಿ ಸರಿಸುಮಾರು ನೂರರಂತೆ ಇದುವರೆಗೆ ಸಾವಿರಾರು ಭೂತಗಳನ್ನು ನೇಮ ಕಟ್ಟಿರುತ್ತಾರೆ. ಕುಲದೈವ, ಸೀಮೆದೈವ, ರಾಜನ್ ದೈವಗಳ ನೇಮ ವಹಿಸಿರುವುದಲ್ಲದೆ ಹತ್ತು-ಹಲವು ಊರ ಜಾತ್ರೆಗಳಲ್ಲೂ ಪ್ರಧಾನ ದೈವಗಳ ಪಾತ್ರಿಯಾಗಿ ಸೇವೆಸಲ್ಲಿಸಿದ್ದಾರೆ. ತುಳುನಾಡಿನ ಮೌಖಿಕ ಸಾಹಿತ್ಯವೆನಿಸಿದ ಸಂಧಿ, ದೈವಪುರಾಣಗಳನ್ನು ಪರಂಪರಾನುಗತವಾಗಿ ಅಭ್ಯಾಸಿಸಿ, ದೈವಾರಾಧನೆಯ ಸಂದರ್ಭದಲ್ಲಿ ಆಯಾಯ ದೈವಗಳಿಗೆ ಸಂಬಂಧಿಸಿದ ಸಂಧಿ, ಮದಿಪುಗಳನ್ನು ಬಾಯಿಪಾಠವಾಗಿ ಒಪ್ಪಿಸುವಷ್ಟು ಪ್ರಭುತ್ವವನ್ನು ಹೊಂದಿರುತ್ತಾರೆ. ಭೂತನರ್ತನ ಸೇವೆಯಲ್ಲಿ ಜನರ ನಂಬಿಕೆಗೆ ಚ್ಯುತಿ ಬಾರದಂತೆ ಹೊಸ ಆಯಾಮವನ್ನು ತಂದು ಹಲವು ಪ್ರಶಸ್ತಿ ಮತ್ತು ಸನ್ಮಾನಗಳನ್ನು ಪಡೆದುಕೊಂಡವರು. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು,ಸಾರ್ವಜನಿಕ ಕ್ಷೇತ್ರದ ಹಲವಾರು ಸಂಘಟನೆಗಳಲ್ಲಿ ಜವಾಬ್ದಾರಿ ನಿರ್ವಹಿಸುತ್ತಿರುವ ಇವರಿಗೆ 2012 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮಾತ್ರವಲ್ಲದೆ, ಗಣರಾಜ್ಯೋತ್ಸವ ಪ್ರಶಸ್ತಿ, ಆದರ್ಶ ಶೃಂಗ ಪ್ರಶಸ್ತಿ, ಸೌರಭ ಪ್ರಶಸ್ತಿ, ಜಾನಪದ ಅಕಾಡೆಮಿ ಪ್ರಶಸ್ತಿ ಸಹಿತ ಹಲವು ಗೌರವ ಸನ್ಮಾನಗಳು ದೊರೆತಿವೆ. 

    Post Views: 183

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.