Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಹತ್ಯಾಕಾಂಡ ಪ್ರಕರಣ : ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ- ಪೊಲೀಸರಿಂದ ಲಾಠಿಚಾರ್ಜ್
    ಇತ್ತೀಚಿನ ಸುದ್ದಿ

    ಉಡುಪಿ ಹತ್ಯಾಕಾಂಡ ಪ್ರಕರಣ : ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ- ಪೊಲೀಸರಿಂದ ಲಾಠಿಚಾರ್ಜ್

    November 16, 2023
    Share

    ಉಡುಪಿ:  ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ ಹಸೀನಾ ಅವರ ಪತಿ ಕುಸಿದು ಬಿದ್ದಿರುವ ಘಟನೆ ಕೂಡಾ ನಡೆಯಿತು. ಬೆಳಗ್ಗಿನಿಂದಲೇ ಜನ ಆರೋಪಿಯನ್ನು ನೋಡಲು ನಿಂತಿದ್ದರು.

    ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ವಿಚಾರಣೆಯ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ತಿಳಿಸಿದ್ದಾರೆ.

    ಈ ಹತ್ಯೆ ಪ್ರಕರಣದ ತನಿಖೆಸಂಬಂಧಿಸಿದಂತೆ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆತಂದ ಸಂದರ್ಭ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಬಿಗಿ ಬಂದೋ ಬಸ್ತ್ ನಲ್ಲಿ ಕಪ್ಪು ವಸ್ತ್ರದಲ್ಲಿ ಮುಖ ಕಾಣದಂತೆ ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಪೊಲೀಸರು ಆರೋಪಿಯನ್ನು ಮಹಜರು ಮಾಡಲು ಕರೆತಂದ ಸಂದರ್ಭ ಆತನನ್ನು ನೋಡಲು ಜನರು ಕಿಕ್ಕಿರಿದು ತುಂಬಿದ್ದರು. ಘಟನಾ ಸ್ಥಳದಲ್ಲಿ ಸುಮಾರು 400 ಕ್ಕೂ ಅಧಿಕ ಜನ ಸೇರಿದ್ದರು.

    ಆರೋಪಿಯನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಕೆಲವರು ಬ್ಯಾರಿಕೇಡ್ ದಾಟಿ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಈ ಸಂದರ್ಭ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.ಈ ಸಂದರ್ಭ ಸ್ಥಳೀಯರು ಪೊಲೀಸ್ ಸಿಬ್ಬಂದಿಗಳಲ್ಲಿ ಬೇಡಿಕೆಯಿಟ್ಟಿದ್ದು, ಕೇವಲ ಎರಡು ನಿಮಿಷಗಳ ಕಾಲ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ. ಇದಲ್ಲದೆ, ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಕ್ಷಿಪ್ರ ನ್ಯಾಯ ಒದಗಿಸುವಂತೆ ಪ್ರತಿಭಟನೆ ಕೂಡ ನಡೆಸಿದ್ದಾರೆ.

    Post Views: 213

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.