ಮಂಗಳೂರು: ವಿಮಾನ ನಿಲ್ಧಾಣದಲ್ಲಿ ದುಬೈನಿಂದ ಬಂದಿಳಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.


ಮುಕ್ಕ ನಿವಾಸಿ ಮೊಹಮ್ಮದ್ (65) ಮೃತರು.ಗುರುವಾರ ದುಬೈಗೆ ತೆರಳಿದ್ದ ಮೊಹಮ್ಮದ್ ಕುಟುಂಬಸ್ಥರನ್ನು ಭೇಟಿಯಾಗಿ ಭಾನುವಾರ ವಾಪಾಸ್ಸಾಗಿದ್ದರು.ಮಂಗಳೂರು ವಿಮಾನ ನಿಲ್ದಾಣ ತಲುಪಿ ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ದಿಡೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.