Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಡ್ಡಿ ಗ್ಯಾಂಗ್‌ನ ಕಥೆ ಕಟ್ಟಿದ ಮಹಿಳೆ – ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲು
    ಇತ್ತೀಚಿನ ಸುದ್ದಿ

    ಮಂಗಳೂರು: ಚಡ್ಡಿ ಗ್ಯಾಂಗ್‌ನ ಕಥೆ ಕಟ್ಟಿದ ಮಹಿಳೆ – ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲು

    November 7, 2024
    Share

    ಮಂಗಳೂರು: ರಾತ್ರಿ ನನ್ನ ಮನೆಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿದ್ದಾರೆ. ತಲವಾರು ತೋರಿಸಿ ಬೆದರಿಸಿ, ಹಣ, ಒಡವೆ ಕೇಳಿದ್ದಾರೆ. ಗ್ಯಾಂಗ್‌ನಲ್ಲಿ ನಾಲ್ವರು ಇದ್ದರು, ನಾನು ಕಿಟಕಿಯ ಮೂಲಕ ಅವರ ಫೋಟೋ ತೆಗೆದಿದ್ದೇನೆ ಎಂದು ಹೇಳಿಕೊಂಡು ಮಹಿಳೆಯೋರ್ವರು ಆ ಫೋಟೋವನ್ನು ವೈರಲ್ ಮಾಡುವ ಕುಖ್ಯಾತ ಚಡ್ಡಿ ಗ್ಯಾಂಗ್ ದರೋಡೆಕೋರರೇ ಬಂದಿದ್ದಾರೆ ಎನ್ನುವ ಹಾಗೆ ಕಥೆ ಕಟ್ಟಿ ಜನರಲ್ಲಿ ಭಯ ಹುಟ್ಟಿಸಿದ ಘಟನೆ ಕೆಯ್ಯೂರಿನಲ್ಲಿ ನವೆಂಬರ್‌ 6ರಂದು ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಸರ್ಕಲ್ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರು ಮಹಿಳೆಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಇದೊಂದು ಕಟ್ಟು ಕಥೆ ಆಗಿದ್ದು ಮಹಿಳೆ ಕಳಿಸಿದ ಫೋಟೋಗಳು 2 ವರ್ಷಗಳ ಹಿಂದೆ ಮಳೆಯಾಲಂನ ಮನೋರಮಾ ನ್ಯೂಸ್‌ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿವೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಡಿವೈಎಸ್‌ಪಿ ಅರುಣ್ ನಾಗೇಗೌಡ, ಸಂಪ್ಯ ಠಾಣಾ ತನಿಖಾ ವಿಭಾಗದ ಎಎಸ್‌ಐ ಸುಷ್ಮಾ ಭಂಡಾರಿ ಹಾಗೂ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದ್ದಾರೆ. ಚಡ್ಡಿ ಗ್ಯಾಂಗ್‌ನ ಕಥೆ ಕಟ್ಟಿದ ಮಾರ್ಗರೇಟ್ ಎಂಬುವರು ಮೂಲತಃ ಕೇರಳ ಮೂಲದವರಾಗಿದ್ದಾರೆ. ಇವರು ತನ್ನ ಗಂಡ ಸೈಂಟ್ ಜಾರ್ಜ್ ಹಾಗೂ ಮಗುವಿನೊಂದಿಗೆ ಕೆಯ್ಯೂರು ಗ್ರಾಮದ ಸಣಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಜಾರ್ಜ್‌ ಅವರು ರಬ್ಬರ್ ಟ್ಯಾಪಿಂಗ್ ಹಾಗೂ ರಬ್ಬರ್ ಹಾಲು ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಮಾರ್ಗರೇಟ್‌ರವರ ಮೊಬೈಲ್ ಫೋನ್ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಅವರು ಯೂಟ್ಯೂಬ್ ಹೆಚ್ಚಾಗಿ ನೋಡುತ್ತಿರುವುದು ಅದರಲ್ಲೂ ಕ್ರೈಂಗೆ ಸಂಬಂಧಿಸಿದ ವಿಡಿಯೋಗಳನ್ನೆ ಹೆಚ್ಚಾಗಿ ನೋಡುತ್ತಿರುವುದು ತಿಳಿದುಬಂದಿದೆ. ಚಡ್ಡಿ ಗ್ಯಾಂಗ್‌ನ ಕಥೆಯೂ ಇದೇ ರೀತಿ ಆಗಿದ್ದು ಮಳೆಯಾಲಂನ ಮನೋರಮಾ ನ್ಯೂಸ್‌ನಲ್ಲಿ 2 ವರ್ಷಗಳ ಹಿಂದೆ ಪ್ರಸಾರಗೊಂಡ ವೀಡಿಯೋ ಸ್ಟೋರಿಯೊಂದರಲ್ಲಿ ಬರುವ ದೃಶ್ಯಗಳಿಂದ ಈ ಫೋಟೋಗಳನ್ನು ಸ್ಟ್ರೀನ್‌ಶಾಟ್ ಮೂಲಕ ತೆಗೆದಿದ್ದಾರೆ. ಆ ಫೋಟೋವನ್ನು ಮೊದಲಿಗೆ ಮನೆಯ ಓನರ್‌ಗೆ ಕಳುಹಿಸಿ ಮನೆಗೆ ದರೋಡೆಕೋರರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರು ಮೊದಲಿಗೆ ಮಹಿಳೆಯ ಮೊಬೈಲ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಶೇರ್ ಮಾಡಿಕೊಂಡ ಫೋಟೋಗಳು ಅಸಲಿ ಅಲ್ಲ ಎಂಬುದು ತಿಳಿದು ಬಂದಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದ್ದು, ಮಹಿಳೆ ಹಂಚಿಕೊಂಡ ಫೋಟೋಗಳು ಕೊಟ್ಟಾಯಂನಲ್ಲಿ ನಡೆದ ಒಂದು ವಿಡಿಯೋ ಸ್ಟೋರಿಯ ಫೋಟೋಗಳಾಗಿವೆ. ಕೆಯ್ಯೂರು ಸಣಂಗಳಕ್ಕೆ ಚಡ್ಡಿ ಗ್ಯಾಂಗ್‌ನ ದರೋಡೆಕೋರರು ಬಂದಿಲ್ಲ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರವಿ.ಬಿ.ಎಸ್. ಮಾಧ್ಯಮಕ್ಕೆ ತಿಳಿಸಿದ್ದಾರೆ.

    Post Views: 191

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.