Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ದಸರಾದ ವಿದ್ಯುದ್ದೀಪಾಲಂಕಾರ ಖರ್ಚು ಪಾಲಿಕೆ ನೀಡಲಿದೆ : ಶಾಸಕ ಕಾಮತ್
    ಇತ್ತೀಚಿನ ಸುದ್ದಿ

    ಮಂಗಳೂರು ದಸರಾದ ವಿದ್ಯುದ್ದೀಪಾಲಂಕಾರ ಖರ್ಚು ಪಾಲಿಕೆ ನೀಡಲಿದೆ : ಶಾಸಕ ಕಾಮತ್

    October 9, 2023
    Share

    ಮಂಗಳೂರು  : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ ನಗರಕ್ಕೆ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

    ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುವ ದಸರಾ ಉತ್ಸವವು ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಬೇಕೆಂಬ ಉದ್ದೇಶದಿಂದ ಕ್ಷೇತ್ರದ ಮುಂದಾಳುಗಳು, ಮಹಾನಗರ ಪಾಲಿಕೆ ಆಡಳಿತ ಪಕ್ಷದವರು, ವಿರೋಧ ಪಕ್ಷದವರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಒಟ್ಟಾಗಿ ಸೇರಿಕೊಂಡು ಈ ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಕಳೆದ ಮೂರು ವರ್ಷಗಳಿಂದ ಅಂದರೆ ಹಿಂದಿನ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅವಧಿಯಲ್ಲಿ ಆರಂಭವಾದ ದಸರಾ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಬೀದಿಬದಿ ವಿದ್ಯುದ್ದೀಪಾಲಂಕಾರದ ವ್ಯವಸ್ಥೆಯನ್ನು ನಂತರ ಪ್ರೇಮಾನಂದ ಶೆಟ್ಟಿ, ಜಯಾನಂದ ಅಂಚನ್, ಪ್ರಸ್ತುತ ಸುಧೀರ್ ಶೆಟ್ಟಿ ಕಣ್ಣೂರು ಮುಂದುವರೆಸಿದ್ದಾರೆ ಎಂದರು.

    ಕ್ಷೇತ್ರದ ಒಳಗಡೆ ಕ್ಷೇತ್ರದ ಆಡಳಿತ ಮಂಡಳಿಯೇ ದೀಪಾಲಂಕಾರವನ್ನು ಮಾಡಲಿದ್ದು, ಕ್ಷೇತ್ರದ ಹೊರಗಡೆ ಬೀದಿಬದಿಯ ವಿದ್ಯುದ್ದೀಪಾಲಂಕಾರದ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಯು ವಹಿಸಿಕೊಂಡಿದ್ದು, ಕುದ್ರೋಳಿ ಮಾತ್ರವಲ್ಲದೇ, ಮಂಗಳಾದೇವಿ, ಬೋಳಾರ ಮಾರಿಗುಡಿ, ಉರ್ವ ಮಾರಿಗುಡಿ, ಭಗವತಿ ದೇವಸ್ಥಾನ, ಸೂಟರ್ ಪೇಟೆ, ವೆಂಕಟರಮಣ ದೇವಸ್ಥಾನ ಹೀಗೆ ನಗರದ ಬಹುತೇಕ ಎಲ್ಲಾ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಮುಂಭಾಗದ ಪ್ರಮುಖ ರಸ್ತೆ, ದೇವರ ಉತ್ಸವ ಸಾಗುವ ಮಾರ್ಗಕ್ಕೆ ವಿದ್ಯುದ್ದೀಪಾಲಂಕಾರದ ವ್ಯವಸ್ಥೆ ಮಾಡಲಾಗುವುದು.
    ಈ ಬಗ್ಗೆ ಯಾವುದೇ ದೇವಸ್ಥಾನಗಳು ಬೇಡಿಕೆ ಇಟ್ಟಿಲ್ಲವಾದರೂ ಮಂಗಳೂರು ದಸರಾ ಉತ್ಸವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಕೂಡ ಭಾಗಿಯಾಗಬೇಕು ಎಂಬ ದೃಷ್ಟಿಯಲ್ಲಿ ಹಲವು ಚಿಂತನೆಗಳನ್ನು ರೂಪಿಸಿಕೊಂಡು ಯೋಜನೆಗಳನ್ನು ಹಾಕಿಕೊಂಡು ಕೈಗೆತ್ತಿಕೊಂಡಿದ್ದೇವೆ. ಉಳಿದಂತೆ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆ, ಪೇಂಟಿಂಗ್, ತಾತ್ಕಾಲಿಕ ಶೌಚಾಲಯ, ಇನ್ನಿತರ ವ್ಯವಸ್ಥೆಗಳ ಬಗ್ಗೆ ಆಡಳಿತ ಮಂಡಳಿಯವರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಿದ್ದಾರೆ.

    ಇದು ತಾತ್ಕಾಲಿಕವಲ್ಲದ ಶಾಶ್ವತವಾದ ಯೋಜನೆಯಾಗಿರುತ್ತದೆ. ಹಾಗಾಗಿಯೇ ಮುಂದಿನ ಬಾರಿಯಿಂದ ಮಹಾನಗರ ಪಾಲಿಕೆ ಬಜೆಟ್ ನಲ್ಲಿಯೇ ಮಂಗಳೂರು ದಸರಾ ಉತ್ಸವದ ವಿದ್ಯುದ್ದೀಪಾಲಂಕಾರದ ವ್ಯವಸ್ಥೆಗಾಗಿಯೇ
    ಅನುದಾನ ಮೀಸಲಿಡುವ ಬಗ್ಗೆ ಚಿಂತಿಸಲಾಗಿದೆ. ಅಂತೆಯೇ ಪ್ರತಿ ವರ್ಷವೂ ಮಂಗಳೂರು ದಸರಾ ಉತ್ಸವ ವಿಜೃಂಭಣೆಯಿಂದ ಆಚರಣೆಯಾಗಲಿ ಎಂಬ ಅಭಿಲಾಷೆ ನಮ್ಮದು ಎಂದು ಶಾಸಕರು ತಿಳಿಸಿದರು

    Post Views: 199

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.