Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಜೈಲು ಜಾಮ‌ರ್ ಜಂಜಾಟ : ಸಾರ್ವಜನಿಕರಿಗೆ ಸಂಕಷ್ಟ, ಹೈಕೋರ್ಟ್‌ನಿಂದ ಪರಿಶೀಲನೆಗೆ ಆದೇಶ…!!
    ಇತ್ತೀಚಿನ ಸುದ್ದಿ

    ಮಂಗಳೂರು ಜೈಲು ಜಾಮ‌ರ್ ಜಂಜಾಟ : ಸಾರ್ವಜನಿಕರಿಗೆ ಸಂಕಷ್ಟ, ಹೈಕೋರ್ಟ್‌ನಿಂದ ಪರಿಶೀಲನೆಗೆ ಆದೇಶ…!!

    November 7, 2025
    Share

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್‌ ಸಿಗ್ನಲ್ ಜಾಮರ್‌ನಿಂದ ಸುತ್ತಲಿನ ಪ್ರದೇಶಗಳಲ್ಲಿ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವ ಕುರಿತು, ಸುತ್ತಮುತ್ತಲಿನ ಮೊಬೈಲ್ ನೆಟ್ವರ್ಕ್ ಸಾಮರ್ಥ್ಯವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದೆ.

    ಮಂಗಳೂರು ವಕೀಲರ ಸಂಘವು ಕಳೆದ ಮಾರ್ಚ್‌ನಿಂದ ನ್ಯಾಯಾಲಯಗಳ ಸಂಕೀರ್ಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಎದುರಾಗಿರುವ ಬಗ್ಗೆ ಹೈಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಈ ಅರ್ಜಿಯ ವಿಚಾರಣೆ ಮಂಗಳವಾರ ಆರಂಭಗೊಂಡಿತು.

    ಸಂಘದ ಪರವಾಗಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು. ಕೈದಿಗಳು ಕಾರಾಗೃಹದೊಳಗೆ ಮೊಬೈಲ್ ಬಳಸುವುದನ್ನು ತಡೆಯುವ ಉದ್ದೇಶದಿಂದ ಜಾಮ‌ರ್ ಅಳವಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಕೈದಿಗಳಿಗೆ ಮೊಬೈಲ್ ನೆಟ್‌ವರ್ಕ್ ಇನ್ನೂ ಲಭ್ಯವಿದೆ ಎಂಬ ಮಾಹಿತಿ ಇದೆ. ಇದರ ಬದಲಿಗೆ, ಕಾರಾಗೃಹದ ಹೊರಗಡೆ ನ್ಯಾಯವಾದಿಗಳು ಹಾಗೂ ಸಾರ್ವಜನಿಕರಿಗೆ ನೆಟ್ವರ್ಕ್‌ ಸಮಸ್ಯೆಯಿಂದಾಗಿ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವಾಗಲೂ ನ್ಯಾಯವಾದಿಗಳಿಗೆ ನಿರಂತರ ಅಡ್ಡಿಯಾಗುತ್ತಿದೆ ಎಂದು ಹೆಗ್ಡೆ ನ್ಯಾಯಾಲಯಕ್ಕೆ ತಿಳಿಸಿದರು.

    ವಾದ ಆಲಿಸಿದ ನ್ಯಾಯಾಧೀಶರು, ಕಾರಾಗೃಹ, ನ್ಯಾಯಾಲಯ ಹಾಗೂ ಸುತ್ತಲಿನ ಪರಿಸರದಲ್ಲಿರುವ ಮೊಬೈಲ್‌ ನೆಟ್‌ವರ್ಕ್ ಸಾಮರ್ಥ್ಯದ ಬಗ್ಗೆ ಸಮಗ್ರ ತಾಂತ್ರಿಕ ಪರಿಶೀಲನೆ ನಡೆಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬ‌ರ್ 18ಕ್ಕೆ ನಿಗದಿಪಡಿಸಲಾಗಿದೆ. ಕಾರಾಗೃಹದ ಸುತ್ತಲಿನ ಒಂದು ಕಿಲೋಮೀಟರ್‌ಗೂ ಹೆಚ್ಚು ಪ್ರದೇಶದಲ್ಲಿ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆ ತಲೆದೋರಿದ್ದು, ಇದು ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ನ್ಯಾಯಾಲಯಗಳು ಸೇರಿದಂತೆ ನಗರದ ಕೇಂದ್ರ ಭಾಗದಲ್ಲಿನ ದೈನಂದಿನ ವ್ಯವಹಾರ ಹಾಗೂ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.

    Post Views: 186

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.