ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಿಗ್ಗಾಮುಗ್ಗವಾಗಿ ಥಳಿಸಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ. ಅಲ್ಲದೆ ಧರ್ಮಗುರು ಮೇಲೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಲಾಗಿದೆ. ಮದರಸ ಕಲಿಸುವ ವೇಳೆ ವಿದ್ಯಾರ್ಥಿಗೆ ಧರ್ಮಗುರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕೃಷ್ಣಾಪುರ ಭಾಗದ ದ್ವೈಬ ಮಸೀದಿಯ ಧರ್ಮ ಗುರುವಿನ ಮೇಲೆ ಹಲ್ಲೆ ನಡೆದಿದೆ ಮಗುವಿನ ತಂದೆ ತಾಯಿ ಮತ್ತು ಕುಟುಂಬದವರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸೂರತ್ಕಲ್ ಠಾಣೆಗೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಮಸೀದಿ ಆಡಳಿತ ಹಾಗೂ ಧರ್ಮ ಗುರುವಿನಿಂದ ದೂರು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.




