Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತೂಫಾನ್ ಆತಂಕ..!
    ಇತ್ತೀಚಿನ ಸುದ್ದಿ

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತೂಫಾನ್ ಆತಂಕ..!

    August 22, 2023
    Share

    ಕೈಕೊಟ್ಟ ಮಳೆಯಿಂದ ಕರಾವಳಿ ದಿನೇ ದಿನೆ ಬಿಸಿ ಕಾವಲಿಯಂತಾಗುತ್ತಿದ್ದು ಕೃಷಿಕರನ್ನು, ಜನತೆಯನ್ನು ಈಗಾಗಲೇ ಚಿಂತೆಗೀಡುಮಾಡಿದೆ.

    ಎಕಾಏಕಿ ಮಾಯವಾದ ಮಳೆಯೇ ಮಧ್ಯೆ ಇದೀಗ ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ಬಿರುಗಾಳಿ ಎದ್ದಿದ್ದು ಈ ಬಾರಿಯ ಮೀನುಗಾರಿಕಾ ಋತು ಆರಂಭವಾಗುತ್ತಿರುವ ಸಂದರ್ಭದಲ್ಲೇ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದ ಮೀನುಗಾರರನ್ನು ಈ ಅನಿರೀಕ್ಷಿತ ವಿದ್ಯಮಾನ ಆತಂಕಕ್ಕೀಡು ಮಾಡಿದೆ.ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಭಾರಿ ನಿರೀಕ್ಷೆಗಳೊಂದಿಗೆ ಕಡಲಿಗೆ ಇಳಿದ ಬೋಟುಗಳು ಇದೀಗ ಅರ್ಧದಲ್ಲೇ ಬಂದರಿಗೆ ಮರಳತೊಡಗಿವೆ. ಆಳಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿವೆ. ಬಿರುಗಾಳಿ, ಮಳೆಯಿಂದಾಗಿ ಮೀನುಗಾರಿಕೆ ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅರ್ಧದಲ್ಲೇ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಬಂದರಿಗೆ ಮರಳಿದ್ದೇವೆ.

    ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಮೀನುಗಾರರೊಬ್ಬರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನೀಗಾಗಲೇ 250 ಕ್ಕೂ ಹೆಚ್ಚು ಮೀನುಗಾರಿಕಾ ದೋಣಿಗಳು ದಡಕ್ಕೆ ಮರಳಿವೆ. ಎರಡು ದಿನಗಳಿಂದ ಬಿರುಗಾಳಿ, ಭಾರಿ ಪ್ರಮಾಣದ ಅಲೆಗಳು, ಮಳೆಯಿಂದಾಗಿ ಅರಬ್ಬಿ ಸಮುದ್ರ ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಆತಂಕಗೊಂಡು ಬೋಟುಗಳನ್ನು ತೀರಕ್ಕೆ ತಂದಿದ್ದಾರೆ. ಇದಲ್ಲದೆ ಮಂಗಳೂರು, ಉಡುಪಿ ಮಹಾರಾಷ್ಟ್ರ,ಕಡೆಗಳಿಂದ ಸಮುದ್ರಕ್ಕೆ ಇಳಿದಿದದ್ದ ಮೀನುಗಾರಿಕಾ ಬೋಟುಗಳೂ ದಡಕ್ಕೆ ಬಂದಿದ್ದು ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿದೆ. ಒಂದು ಕಡೆ ಮಳೆಯಿಲ್ಲದೆ ಕಂಗಲಾದ ರೈತರಂತೆ, ಮೀನುಗಾರರೂ ಪೃಕೃತಿಯ ಮುನಿಸಿಗೆ ಆತಂಕಕ್ಕೆ ಒಳಗಾಗಿದ್ದಾರೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.