Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ
    Uncategorized

    ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    October 15, 2023
    Share

    ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾದ ಹಿನ್ನಲೆಯಲ್ಲಿ ನಗರದ ಶ್ರೀಕ್ಷೇತ್ರ‌ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ರವಿವಾರ ಬೆಳಗ್ಗೆ ನೆರವೇರಿತು. ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು.

    ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಈ ಬಾರಿ ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ವಿಶೇಷವಾಗಿದೆ. ಶಿಲಾಬಾಲಿಕೆಯರು, ವಿವಿಧ ದೇವರುಗಳ ಕಲಾಕೃತಿಗಳು ದರ್ಬಾರ್ ಮಂಟಪದ ಕಂಬಕಂಬಗಳಲ್ಲಿ ರಾರಾಜಿಸುತ್ತಿದ್ದಾರೆ. ಸಾಮಾನ್ಯ ನವದುರ್ಗೆಯರನ್ನು ಮಂಟಪದೊಳಗಡೆ ಪ್ರತಿಷ್ಠಾಪಿಸಲಾಗುತ್ತಿತ್ತು. ಆದರೆ ಈ ಬಾರಿ ಪ್ರತ್ಯೇಕ ಗುಡಿಗಳನ್ನು ನಿರ್ಮಿಸಿ ಅದರೊಳಗಡೆ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗಿದೆ. ಮಂಟಪದ ಮೇಲ್ಗಡೆ ಸ್ವಯಂಚಾಲಿತವಾಗಿ ತಿರುಗುವ ಮೇಲ್ಛಾವಣಿಯನ್ನು ಅತ್ಯಾಕರ್ಷಕವಾಗಿ ರಚಿಸಲಾಗಿದೆ. ದರ್ಬಾರ್ ಮಂಟಪ ಹೊಕ್ಕುವಂತೆಯೇ ಎಡಬಲ ಬದಿಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹಾಗೂ ಶ್ರೀ ಗೋಕರ್ಣನಾಥ ದೇವರ ಬೃಹತ್ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಸುಮಾರು 50 ಅಧಿಕ ಬೃಹತ್ ಗಾತ್ರದ ಕಂಬಗಳು, ಅದರ ಕೆತ್ತನೆಗಳು ಬೇಲೂರು – ಹಳೆಬೀಡು ದೇವಾಲಯ ಮಾದರಿಯನ್ನು ನೆನಪಿಸುತ್ತದೆ. ಎಲ್ಲೆಡೆ ಕಣ್ಣುಕೋರೈಸುವ ವಿದ್ಯುತ್ ದೀಪಾಲಂಕಾರದಲ್ಲಿ ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿದೆ. ಮುಲ್ಕಿಯ ಚಂದ್ರಶೇಖರ ಸುವರ್ಣ ಅವರ ಸುವರ್ಣ ಆರ್ಟ್ಸ್ ತಂಡ ಈ ದಸರಾ ಮಂಟಪವನ್ನು ನಿರ್ಮಾಣ ಮಾಡಿದೆ.

    Post Views: 218

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.