Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ
    ಕ್ರೈಂ ಸ್ಟೋರಿ

    ಮಂಗಳೂರು: ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ

    June 7, 2025
    Share

    ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಶುಕ್ರವಾರ ಜಾಮೀನು ಆಗಿದೆ.

    ಪ್ರಕರಣದ 18ನೆ ಆರೋಪಿ ಆದರ್ಶ್ ಎಂಬಾತನಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

    ಮೇ 31ರಂದು ಆರೋಪಿಗಳಾದ ರಾಹುಲ್ ಮತ್ತು ಕೆ.ಸುಶಾಂತ್ ಎಂಬವರಿಗೆ ಜಾಮೀನು ಲಭಿಸಿತ್ತು. ಜೂ.4ರಂದು ಸಂದೀಪ್, ದೀಕ್ಷಿತ್, ಸಚಿನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಬಂಧಿಸಿದ್ದರು. ಆ ಪೈಕಿ ಈವರೆಗೆ 6 ಮಂದಿಗೆ ಜಾಮೀನು ಲಭಿಸಿದೆ. ಮೂವರ ಜಾಮೀನು ಅರ್ಜಿ ತಿರಸ್ಕೃತಗೊಂಡಿವೆ. ಉಳಿದ 7 ಮಂದಿ ಆರೋಪಿಗಳ ಅರ್ಜಿಯು ಸೋಮವಾರ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ.

    ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ, ದೂರಿನಲ್ಲಿದ್ದ ವ್ಯತ್ಯಾಸಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿವೆ ಎಂದು ಹೇಳಲಾಗುತ್ತಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇನ್‌ಸ್ಪೆಕ್ಟರ್ ಸಹಿತ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿತ್ತು.

    Post Views: 12

    AccusedReleased BailGranted CourtDecision CrimeNews GroupMurderCase JudicialProceedings LawAndOrder LegalUpdate Mangaluru

    Related Posts

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025

    ಪುಷ್ಪಲತಾ ಹತ್ಯೆ: ಹನ್ನೊಂದು ವರ್ಷವಾದರೂ ಪತ್ತೆಯಾಗದ ಹಂತಕ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.