ಉಡುಪಿ : ಉಡುಪಿಯ ಕಾಲೇಜು ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಅವರು ಭೇಟಿ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಆದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನಿಶ್ ಕರ್ಬಿಕರ್ ಈ ಕುರಿತು ಹೇಳಿಕೆ ಒಂದನ್ನು ನೀಡಿದ್ದಾರೆ.ಉಡುಪಿ ಪೊಲೀಸರು ನಡೆಸಿದ ತನಿಖಾ ವರದಿ ಪಡೆದುಕೊಂಡಿದ್ದೇನೆ. ಸಿಐಡಿ ಅಧಿಕಾರಿಗಳ ಜೊತೆ ಈ ಪ್ರಕರಣದ ಕುರಿತು ಚರ್ಚಿಸಿದ್ದೇನೆ ಮುಂದಿನ ತನಿಕ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನೇಮಕಗೊಂಡಿದ್ದಾರೆ ಎಂದರು.
ಮೇಲ್ವಿಚಾರಣೆಯನ್ನು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ. ಕೇಸ್ ತನಿಖೆಯಾದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನೀಶ್ ಹೇಳಿಕೆ ನೀಡಿದ್ದಾರೆ.