Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರ ಬಂಧನ

    November 18, 2022
    Share

    ಮಂಗಳೂರು :  ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

    ಬಂಧಿತ ಆರೋಪಿಗಳನ್ನು ರಮೀಝ್ ರಾಝ್ (ಪ್ರಾಯ 30 ), ವಾಸ : ಡೋರ್ ನಂಬ್ರ : 2-392 , ತೌಡುಗೋಳಿ ಕ್ರಾಸ್ , ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು ಮತ್ತು ಅಬ್ದುಲ್ ಖಾದರ್ ಹ್ಯಾರಿನ್ , (ಪ್ರಾಯ31 ) , ವಾಸ ಜೀಲಾನಿ ಮಂಝಿಲ್ , ಮದಂಗಳ ಕಟ್ಟ ಮೀಯಪದವು , ಮಂಜೇಶ್ವರ , ಕಾಸರಗೋಡು ಜಿಲ್ಲೆ , ಕೇರಳ ರಾಜ್ಯ ಎಂದು ಗುರುತಿಸಲಾಗಿದೆ.

    ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಅಬ್ದುಲ್ ಖಾದರ್‌ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

    Post Views: 162

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.