Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : MCC BANK ಅಧ್ಯಕ್ಷನ ಕಿರುಕುಳ, ವಾಟ್ಸಾಪ್ ಸ್ಟೇಟಸ್ ಹಾಕಿ ವ್ಯಕ್ತಿ ಆತ್ಮಹತ್ಯೆ- MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು : MCC BANK ಅಧ್ಯಕ್ಷನ ಕಿರುಕುಳ, ವಾಟ್ಸಾಪ್ ಸ್ಟೇಟಸ್ ಹಾಕಿ ವ್ಯಕ್ತಿ ಆತ್ಮಹತ್ಯೆ- MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅರೆಸ್ಟ್

    December 19, 2024
    Share

    ಮಂಗಳೂರು : ಬ್ಯಾಂಕ್ ಸಾಲದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೋ ಪದವು ನಿವಾಸಿ ಮನೋಹರ್ ಪಿರೇರಾ ಆತ್ಮಹತ್ಯೆ ಮಾಡಿದವರು.

    ಆತ್ಮಹತ್ಯೆಗೂ ಮುನ್ನ ಅವರು ತಾನು ಆತ್ಮಹತ್ಯೆ ಮಾಡಲು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋನೇ ಕಾರಣ ಎಂದು ಮೊಬೈಲ್ ವೀಡಿಯೋ ಮಾಡಿದ್ದರು. ಮನೋಹರ್ ಪಿರೇರಾ ಅವರು ಉಳಾಯಿಬೆಟ್ಟುವಿನ ಕುಟಿನೋ ಪದವಿನಲ್ಲಿರುವ ತಮ್ಮ ಮನೆಯ ಮೇಲೆ ಎಂಸಿಸಿ ಬ್ಯಾಂಕ್‌ನಲ್ಲಿ 10ವರ್ಷಗಳ ಹಿಂದೆ ಸಾಲ ಪಡೆದಿದ್ದರು.

    ಈ ಸಾಲದ ಕಂತನ್ನು ಅವರ ದೊಡ್ಡಣ್ಣ ಮೆಲ್ಬಮ್‌ರವರು ತೀರಿಸುತ್ತಿದ್ದರು. ಕೊರೋನಾ ಸಂದರ್ಭ ಮೆಲ್ಬಮ್‌ರವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಲೋನ್ ಕಂತು ಬ್ಯಾಂಕಿಗೆ ಕಟ್ಟಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2ವರ್ಷಗಳ ಹಿಂದೆ ಬ್ಯಾಂಕ್‌ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನೋಹರ್ ಪಿರೇರಾರಿಗೆ ಮಾನಸಿಕ ಖಿನ್ನತೆ ಉಂಟಾಗಿ 2ಸಲ ಹೃದಯಾಘಾತವಾಗಿತ್ತು. ಬಳಿಕ ಸಿಸ್ಟರ್ ಕ್ರಿಸ್ಟಿನ್ ಅವರು ದತ್ತಿ ಸಂಸ್ಥೆಯಿಂದ 2023ರ ಫೆಬ್ರವರಿಯಲ್ಲಿ ಮನೋಹರ್‌ರವರ ಬ್ಯಾಂಕ್ ಖಾತೆಗೆ 15 ಲಕ್ಷ ಕಳಿಸಿದ್ದಾರೆ.

    ಈ ಹಣದಲ್ಲಿ ಬ್ಯಾಂಕ್ ಸಾಲ ತೀರಿಸುವ ಬಗ್ಗೆ ಮನೋಹರ್ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋರೊಂದಿಗೆ ಮಾತನಾಡಿ ಸೆಲ್ಸ್ ಚೆಕ್ ನೀಡಿದ್ದರು. ಬಳಿಕ ಬ್ಯಾಂಕಿನವರು ಸೀಜ್ ಮಾಡಿದ ಮನೆಯನ್ನು 6 ತಿಂಗಳ ಹಿಂದೆ ವಾಪಸ್ ವಾಸಕ್ಕೆ ಬಿಟ್ಟು ಕೊಟ್ಟಿದ್ದರು. ಲೋನ್ ಕಂತು ಇನ್ನೂ ಕೂಡ ಬಾಕಿ ಇರುವುದರಿಂದ ಮನೋಹರ್‌ರವರು ಮಾನಸಿಕವಾಗಿ ನೊಂದು ಡಿಸೆಂಬರ್ 17ರಂದು ಸಂಜೆ 3.45 ರಿಂದ 5ಗಂಟೆಯ ಒಳಗೆ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಮೊಬೈಲ್ ವೀಡಿಯೊ ಮಾಡಿ ತುಳು ಭಾಷೆಯಲ್ಲಿ ‘MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸೀಜ್ ಮಾಡಿರುವ ಮನೆಗೆ ತಾನು 15 ಲಕ್ಷ ಕೊಟ್ಟಿದ್ದೇನೆ. ಆದರೆ ಆತ 9 ಲಕ್ಷ ತಿಂದಿದ್ದಾನೆ’ ಎಂದು ಹೇಳಿದ್ದಾರೆ.

    ಸಿಸ್ಟರ್ ಕ್ರಿಸ್ಟಿನ್ ಅವರು ದತ್ತಿ ಸಂಸ್ಥೆಯಿಂದ ಕಳುಹಿಸಿದ್ದ 15 ಲಕ್ಷ ಹಣದಲ್ಲಿ 9 ಲಕ್ಷ ರೂ. ಹಣವನ್ನು ಬ್ಯಾಂಕ್ ಅಧ್ಯಕ್ಷ ಸೆಲ್ಫ್ ಚೆಕ್ ಮೂಲಕ ತೆಗೆದುಕೊಂಡಿದ್ದರಿಂದ ಮನೆಯ ಮೇಲಿನ ಸಾಲ ಇನ್ನೂ ತೀರಿಲ್ಲ ಎಂಬ ಹತಾಶೆಯಿಂದ ಮನೋಹರ್ ಪಿರೇರಾ ಅವರ ಅನಾರೋಗ್ಯ ಉಲ್ಬಣಿಸಿ ಮಾನಸಿಕ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 402

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.