Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026
    Share

    ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದ ಅವರು, ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್‌ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ ಎಂದು ಹೇಳಿದರು. ಬ್ಯಾಂಕ್‌ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.
    ಅಧ್ಯಕ್ಷೀಯ ಭಾಷಣದಲ್ಲಿ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು 2025–26ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ದಾಖಲಿಸಿದ ಐತಿಹಾಸಿಕ 25% ಬೆಳವಣಿಗೆಗೆ ಸಿಬ್ಬಂದಿಯನ್ನು ಅಭಿನಂದಿಸಿದರು. ಈ ಸಾಧನೆಯು ಸಿಬ್ಬಂದಿಯ ಸಮೂಹ ಬದ್ಧತೆ, ಕಠಿಣ ಪರಿಶ್ರಮ ಹಾಗೂ ಗ್ರಾಹಕ ಕೇಂದ್ರಿತ ಸೇವೆಯ ಪ್ರತಿಫಲವಾಗಿದೆ ಎಂದು ಹೇಳಿದರು. ಹೊಸದಾಗಿ ಆರಂಭಗೊAಡಿರುವ ಶಾಖೆಗಳ ಸಾಧನೆಯನ್ನು ಉಲ್ಲೇಖಿಸಿದ ಅವರು, ಬ್ರಹ್ಮಾವರ ಶಾಖೆಯು ಕೇವಲ ಎರಡು ವರ್ಷಗಳಲ್ಲಿ ಲಾಭದಾಯಕತೆಯನ್ನು ಸಾಧಿಸಿರುವುದನ್ನು ಮತ್ತು ಹೊಸ ಶಾಖೆಗಳು ಅಲ್ಪಾವಧಿಯಲ್ಲೇ ₹10 ಕೋಟಿ ವ್ಯವಹಾರದ ಮೈಲಿಗಲ್ಲು ದಾಟಿರುವುದನ್ನು ಶ್ಲಾಘಿಸಿದರು. ಎಲ್ಲಾ ಸಿಬ್ಬಂದಿಯೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಗ್ರಾಹಕ ಸೇವೆಗೆ ಹೆಚ್ಚಿನ ಆದ್ಯತೆ ನೀಡಿ ಇನ್ನಷ್ಟು ಸಾಧನೆ ಮಾಡಲು ಕರೆ ನೀಡಿದರು.

    ಬ್ಯಾಂಕಿನ ಸಲಹೆಗಾರರು ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್‌ನ ಮಾಜಿ ಉಪ ಮಹಾಪ್ರಬಂಧಕರಾದ ಶ್ರೀ ಎಸ್.ಎಚ್. ವಿಶ್ವೇಶ್ವರಯ್ಯ ಅವರು ಬ್ಯಾಂಕಿನ ಠೇವಣಿ, ಸಾಲ ವಿತರಣೆ, ವ್ಯವಹಾರ ವಹಿವಾಟು, ಬೆಳವಣಿಗೆಯ ಪ್ರವೃತ್ತಿ ಹಾಗೂ ಎನ್‌ಪಿಎ ಸ್ಥಿತಿಯನ್ನು ಒಳಗೊಂಡ ಸಮಗ್ರ ಕಾರ್ಯಕ್ಷಮತಾ ವರದಿಯನ್ನು ಮಂಡಿಸಿದರು.

    ಸಿಬ್ಬAದಿ ಕಾರ್ಯಕ್ಷಮತೆ ಪರಿಶೀಲನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಾಲ್ಟರ್ ನಂದಳಿಕೆ, ಲೂರ್ಡ್ಸ್ ಸೆಂಟ್ರಲ್ ಶಾಲೆ, ಬಿಜೈನ ಪ್ರಾಂಶುಪಾಲರಾದ ವಂ. ಫಾ. ಜಾನ್ ಎಲ್. ಸಿಕ್ವೇರಾ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಎಸಿಪಿ ಶ್ರೀ ರವೀಶ್ ಎಸ್. ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ಸುನಿಲ್ ಮಿನೇಜಸ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಪುತ್ತೂರು ಶಾಖೆಯ ವ್ಯವಸ್ಥಾಪಕರಾದ ಶ್ರೀಮತಿ ಐರಿನ್ ಡಿಸೋಜಾ ಹಾಗೂ ಬಜ್ಪೆ ಶಾಖೆಯ ಸಿಬ್ಬಂದಿಯಾದ ಕುಮಾರಿ ವೈಲೆಟ್ ಕ್ರಾಸ್ತಾ ಅವರನ್ನು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಗೌರವಿಸಲಾಯಿತು. ಇತ್ತೀಚೆಗೆ ವಿವಾಹವಾದ ಸಿಬ್ಬಂದಿಯವರನ್ನೂ ಅಭಿನಂದಿಸಿ ಸನ್ಮಾನಿಸಲಾಯಿತು.

    2025–26ನೇ ಸಾಲಿನ ಸ್ಟಾರ್ ಅಚೀವರ್ಸ್ ಪ್ರಶಸ್ತಿಯನ್ನು ಕುಲಶೇಖರ ಶಾಖೆಯ ವ್ಯವಸ್ಥಾಪಕರಾದ ಶ್ರೀಮತಿ ವಿಲ್ಮಾ ಜ್ಯೋತಿ ಸಿಕ್ವೇರಾ, ಮೂಡುಬಿದಿರೆ ಶಾಖೆಯ ಶ್ರೀಮತಿ ಶರೋನ್ ರೊಸಾರಿಯೊ, ಶಿರ್ವ ಶಾಖೆಯ ಶ್ರೀಮತಿ ಅನ್ಸಿಲ್ಲಾ ಫೆರ್ನಾಂಡಿಸ್, ಕುಂದಾಪುರ ಶಾಖೆಯ ಶ್ರೀಮತಿ ಜ್ಯೋತಿ ಬ್ಯಾರೆಟ್ಟೋ ಹಾಗೂ ಬೈಂದೂರು ಶಾಖೆಯ ಶ್ರೀ ಸಂದೀಪ್ ಕ್ವಾಡ್ರÃಸ್ ಅವರಿಗೆ ಪ್ರದಾನಿಸಲಾಯಿತು.

    ಠೇವಣಿ ಮತ್ತು ಸಾಲ ವಿಭಾಗದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಯ ಪ್ರಶಸ್ತಿಯನ್ನು ಅಶೋಕನಗರ ಶಾಖೆ ಪಡೆದುಕೊಂಡಿತು. ಠೇವಣಿ ಸಂಗ್ರಹಣಾ ಶ್ರೇಷ್ಠತಾ ಪ್ರಶಸ್ತಿಯನ್ನು ಫೌಂಡರ್ಸ್, ಕುಲಶೇಖರ, ಮೂಡುಬಿದಿರೆ, ಶಿರ್ವ, ಬಜ್ಪೆ ಹಾಗೂ ಕಾರ್ಕಳ ಶಾಖೆಗಳು ಪಡೆದುಕೊಂಡರೆ, ಸಾಲ ಬೆಳವಣಿಗೆ ಶ್ರೇಷ್ಠತಾ ಪ್ರಶಸ್ತಿಯನ್ನು ಕುಂದಾಪುರ, ಪುತ್ತೂರು, ಬಿ.ಸಿ.ರೋಡ್ ಹಾಗೂ ಬ್ರಹ್ಮಾವರ ಶಾಖೆಗಳು ಪಡೆದವು. ಕಾಸಾ, ಠೇವಣಿ ಮತ್ತು ಸಾಲ ಗುರಿಗಳ ಸಾಧನೆಗಾಗಿ ನೀಡಲಾದ ಅತ್ಯುತ್ತಮ ಶಾಖೆ ಸಾಧನೆ ಪ್ರಶಸ್ತಿಯನ್ನು ಉಡುಪಿ, ಬೆಳ್ತಂಗಡಿ, ಬೆಳ್ಮಣ್, ಬೈಂದೂರು ಹಾಗೂ ಸಂತೆಕಟ್ಟೆ ಶಾಖೆಗಳು ಪಡೆದುಕೊಂಡವು. ಅತಿ ಹೆಚ್ಚು ವ್ಯವಹಾರ ವಹಿವಾಟು ಪ್ರಶಸ್ತಿಯನ್ನು ಫೌಂಡರ್ಸ್ ಶಾಖೆ ಪಡೆದುಕೊಂಡರೆ, ಒಂದು ವರ್ಷದ ಮೈಲಿಗಲ್ಲು ಸಾಧನೆ ಪ್ರಶಸ್ತಿಯನ್ನು ಬೆಳ್ಮಣ್, ಬೆಳ್ತಂಗಡಿ ಹಾಗೂ ಬೈಂದೂರು ಶಾಖೆಗಳು ಪಡೆದುಕೊಂಡವು.

    ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ವಾಲ್ಟರ್ ನಂದಳಿಕೆ ಅವರು ಎಂಸಿಸಿ ಬ್ಯಾಂಕ್‌ನ ಗಮನಾರ್ಹ ಬೆಳವಣಿಗೆ ಮತ್ತು ಸಾಧನೆಗಳನ್ನು ಶ್ಲಾಘಿಸಿದರು. ಬ್ಯಾಂಕ್‌ನ ನಿರಂತರ ಪ್ರಗತಿ, ವಿಸ್ತರಿಸುತ್ತಿರುವ ಶಾಖಾ ಜಾಲ ಹಾಗೂ ಗ್ರಾಹಕ ಕೇಂದ್ರಿತ ಸೇವೆಗಳು ಸಿಬ್ಬಂದಿಯ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
    ವಂ. ಫಾ. ಜಾನ್ ಎಲ್. ಸಿಕ್ವೇರಾ ಅವರು ಎಂಸಿಸಿ ಬ್ಯಾಂಕ್ ಅನ್ನು ತನ್ನ ಸದಸ್ಯರ ಸೇವೆಯನ್ನು ಗುರುತಿಸಿ ಗೌರವಿಸುವ ಒಂದು ದೊಡ್ಡ ಕುಟುಂಬವೆAದು ಬಣ್ಣಿಸಿದರು. ನಿವೃತ್ತ ಸಿಬ್ಬಂದಿ, ಹೊಸದಾಗಿ ವಿವಾಹವಾದ ಸಿಬ್ಬಂದಿ ಹಾಗೂ ಸಾಧಕರನ್ನು ಸನ್ಮಾನಿಸುವ ಬ್ಯಾಂಕ್‌ನ ಕಾರ್ಯವನ್ನು ಶ್ಲಾಘಿಸಿದ ಅವರು, ಗ್ರಾಹಕರ ವಿಶ್ವಾಸ ಗಳಿಸುವುದು ಮತ್ತು ಉಳಿಸಿಕೊಳ್ಳುವುದೇ ಬ್ಯಾಂಕಿAಗ್ ಕ್ಷೇತ್ರದ ಯಶಸ್ಸಿನ ಮೂಲಮಂತ್ರ ಎಂದು ಹೇಳಿದರು.

    ಎಸಿಪಿ ಶ್ರೀ ರವೀಶ್ ಎಸ್. ನಾಯಕ್ ಅವರು ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಸುರಕ್ಷತಾ ಜಾಗೃತಿಯ ಮಹತ್ವವನ್ನು ವಿವರಿಸಿದರು. ಸೈಬರ್ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದಿರುವAತೆ ಸಿಬ್ಬಂದಿಗೆ ಕರೆ ನೀಡಿದ ಅವರು, ಗ್ರಾಹಕರಲ್ಲಿ ಸುರಕ್ಷಿತ ಡಿಜಿಟಲ್ ಬ್ಯಾಂಕಿAಗ್ ಪದ್ಧತಿಗಳ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.
    ನಂತರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯ ಶ್ರೀ ಸುರೇಶ್ ಎಂ. ಅವರು ಸೈಬರ್ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು. ಸೈಬರ್ ವಂಚನೆ, ಆನ್‌ಲೈನ್ ಬ್ಯಾಂಕಿAಗ್ ವಂಚನೆ, ವಾಟ್ಸಾಪ್ ವಂಚನೆ, ಫೇಸ್‌ಬುಕ್ ವಂಚನೆ, ಒಟಿಪಿ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ವಂಚನೆಗಳ ಕುರಿತು ಮಾಹಿತಿ ನೀಡಿದ ಅವರು, ಇಂತಹ ವಂಚನೆಗಳಿAದ ರಕ್ಷಿಸಿಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು.

    ನಿರ್ದೇಶಕರಾದ ಶ್ರೀ ಜೋಸೆಫ್ ಅನಿಲ್ ಪತ್ರಾವೊ, ಶ್ರೀ ಅಂಡ್ರೂ÷್ಯ ಡಿಸೋಜ, ಶ್ರೀ ಹೆರಾಲ್ಡ್ ಮೊಂತೇರೊ, ಶ್ರೀ ಮೆಲ್ವಿನ್ ವಾಸ್, ಶ್ರೀ ರೋಶನ್ ಡಿಸೋಜ, ಶ್ರೀಮತಿ ಐರಿನ್ ರೆಬೆಲ್ಲೊ, ಶ್ರೀ ಎಲ್‌ರೊಯ್ ಕಿರಣ್ ಕ್ರಾಸ್ಟೊ, ಡಾ} ಜೆರಾಲ್ಡ್ ಪಿಂಟೊ, ಶ್ರೀ ಫೆಲಿಕ್ಸ್ ಡಿಕ್ರುಜ್, ವ್ಯತ್ತಿಪರ ನಿರ್ದೇಶಕರಾದ ಶ್ರೀ ಸಿ.ಜಿ.ಪಿಂಟೊ ಉಪಸ್ಥಿತರಿದ್ದರು.

    ಉಪ ಮಹಾಪ್ರಬಂಧಕರಾದ ಶ್ರೀ ರಾಜ್ ಎಫ್. ಮಿನೇಜಸ್ ವಂದನಾರ್ಪಣೆ ಸಲ್ಲಿಸಿದರು. ಐಟಿ ವಿಭಾಗದ ಮುಖ್ಯಸ್ಥರಾದ ಶ್ರೀ ಅಲ್ವಿನ್ ಝೇವಿಯರ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಬ್ಯಾಂಕಿನ ಸಿಬ್ಬಂದಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    Post Views: 1

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.