Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನ- ಡಾ.ಮೋಹನ್ ಆಳ್ವರು ಆಯೋಜಿಸಿದ್ದ ಉಪಹಾರ ಕೂಟವನ್ನು ಸಚಿವ ರದ್ದುಪಡಿಸಿದ ಬೈರತಿ ಸುರೇಶ್
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನ- ಡಾ.ಮೋಹನ್ ಆಳ್ವರು ಆಯೋಜಿಸಿದ್ದ ಉಪಹಾರ ಕೂಟವನ್ನು ಸಚಿವ ರದ್ದುಪಡಿಸಿದ ಬೈರತಿ ಸುರೇಶ್

    November 25, 2023
    Share

    ಮೂಡುಬಿದಿರೆ: ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್‌ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ ಬೆಳಗ್ಗಿನ ಉಪಹಾರ ಕೂಟವನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನದ ಹಿನ್ನೆಲೆಯಲ್ಲಿ ರದ್ದುಪಡಿಸಿದ ವಿದ್ಯಮಾನ ನಡೆದಿದೆ.

    ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜು‌ಕೊಳ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ್ದರು, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಮುಖ್ಯಸ್ಥ ಮೋಹನ್‌ ಆಳ್ವ ಅವರ ನಿವಾಸದಲ್ಲಿ ಸಚಿವರಿಗೆ ಬೆಳಗ್ಗಿನ ಉಪಾಹಾರ ಕೂಟ ಏರ್ಪಡಿಸಲಾಗಿತ್ತು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಅವರ ಉಮೇದುವಾರಿಕೆ‌ ಸಲ್ಲಿಸುವಾಗಲೂ ಜೊತೆಯಾಗಿದ್ದ ಡಾ. ಮೋಹನ್ ಆಳ್ವರ ನಿವಾಸದಲ್ಲಿ ಸಚಿವರು ಉಪಹಾರ ಕೂಟದಲ್ಲಿ ಪಾಲ್ಗೊಳ್ಳೂವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟು ಮಾಡಿತ್ತು‌. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ನೇರವಾಗಿ ಬಿಜೆಪಿಯನ್ನು ಬೆಂಬಲಿಸಿದವರ ಮನೆಗೆ ಸಚಿವರು ಹೋಗುವುದು ಸರಿಯಲ್ಲ ಎಂಬ ಅಭಿಪ್ರಾಯ ಕಾರ್ಯಕರ್ತರಿಂದ ಬಂದಿತ್ತು. ಬಿಜೆಪಿ ಬೆಂಬಲಿಗರ ನಿವಾಸದಲ್ಲಿ ಉಪಹಾರ ಕೂಟ ಏರ್ಪಡಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಕೈ ಕಾರ್ಯಕರ್ತರು ಪಕ್ಷದ ಮುಖಂಡರಲ್ಲಿ ಅಸಾಮಾಧಾನ ಹೇಳಿಕೊಂಡಿದ್ದರು. ಜೊತೆಗೆ ಸಚಿವರ ಕಾರ್ಯಕ್ರಮದಲ್ಲಿ ಭಾಗವಹಿಸದೇ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು.ಈ ಹಿನ್ನೆಲೆಯಲ್ಲಿ ಬೆಳಗ್ಗೆ ತರಾತುರಿಯಲ್ಲಿ ಡಾ. ಮೋಹನ್ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಾಹಾರ ಕೂಟವನ್ನು ರದ್ದುಗೊಳಿಸಿದ್ದು. ಈ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೊಂಡಿದೆ ಎಂದು ತಿಳಿದು ಬಂದಿದೆ.

    Post Views: 254

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.