Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ ತಹಶೀಲ್ದಾರ್‌ಗೆ ಹಲ್ಲೆ ಪ್ರಕರಣ ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಸಹಿತ ನಾಲ್ವರಿಗೆ ಒಂದು ವರ್ಷ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಉಪ ತಹಶೀಲ್ದಾರ್‌ಗೆ ಹಲ್ಲೆ ಪ್ರಕರಣ ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಸಹಿತ ನಾಲ್ವರಿಗೆ ಒಂದು ವರ್ಷ ಜೈಲು ಶಿಕ್ಷೆ

    November 1, 2023
    Share

    ಮಂಜೆಶ್ವರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್‌ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿ ಆದೇಶ ನೀಡಿದೆ.
    ಜೊತೆಗೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದೂ, ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಲು ನ್ಯಾ. ಅಬ್ದುಲ್ ಬಾಸಿತ್ ಆದೇಶಿಸಿದ್ದಾರೆ.

    ಬಶೀರ್, ಅಬ್ದುಲ್ ಖಾದರ್ ಮತ್ತು ಅಬ್ದುಲ್ಲಾ ಶಿಕ್ಷೆಗೊಳಗಾದ ಇತರರು.

    ಪ್ರಕಣವೇನು: ಘಟನೆ ನಡೆದಿರುವುದು 2010ರಲ್ಲಿ‌. ತಾಂತ್ರಿಕ ಕಾರಣದಿಂದ ಮತದಾರರೋರ್ವರ ಹೆಸರು ಪಟ್ಟಿಗೆ ಸೇರ್ಪಡೆಗೊಳಿಸದೇ ಪೆಂಡಿಂಗ್ ಇಡಲಾಗಿತ್ತು. ಈ ವಿಚಾರವಾಗಿ ಅಂದು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಎಕೆಎಂ ಅಶ್ರಫ್ ಮತ್ತು ಇತರ ಮೂವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಚೇರಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ಇದ್ದ ಉಪ ತಹಶೀಲ್ದಾರ್ ದಾಮೋದರನ್ ಅವರನ್ನು ಪ್ರಶ್ನಿಸಿದ್ದರು. ತಾಂತ್ರಕ ಸಮಸ್ಯೆ ಪರಿಹಾರಗೊಂಡ ಬಳಿಕವಷ್ಟೇ ಮತದಾರರ ಪಟ್ಟಿಗೆ ಹೆಸರು ಸೇರಿಸುತ್ತೇನೆ. ಈ ಕುರಿತಾದ ದಾಖಲೆ ಸಲ್ಲಿಸಿ ಎಂದು ಉಪತಹಶೀಲ್ದಾರ್ ಹೇಳಿದ್ದರು. ಆದರೆ ಇದರಿಂದ ರೊಚ್ಚಿಗೆದ್ದ ಅಶ್ರಫ್ ಮತ್ತು ಸಹಚರರು ಸರಕಾರಿ ಕೃತ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿತ್ತು. ಇದರಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿತ್ತು. ಕೈಯಿಂದ ಹಲ್ಲೆ ಪ್ರಕರಣ ಸಂಬಂಧ ಐಪಿಸಿ 253 ಸೆಕ್ಷನ್‌ನಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

    ಎರಡು ವರ್ಷಕ್ಕೂ ಕಡಿಮೆ ಅವಧಿಯ ಜೈಲು ಶಿಕ್ಷೆ ಆಗಿರುವುದರಿಂದ ಶಾಸಕ ಸ್ಥಾನಕ್ಕೆ ಚ್ಯುತಿ ಇಲ್ಲ. ಆದರೆ ಈ ಬಗ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಎಕೆಎಂ ಅಶ್ರಫ್ ತಿಳಿಸಿದ್ದಾರೆ.

    Post Views: 213

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.