Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು
    ಇತ್ತೀಚಿನ ಸುದ್ದಿ

    ಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು

    October 21, 2024
    Share

    ಆರೋಪಿಗಳು ತನಿಖಾ ಸಂಸ್ಥೆಗೆ ಮೊಬೈಲ್ ಫೋನ್ ಸಲ್ಲಿಸದೇ ಇರುವುದು ಅಸಹಕಾರ ಎಂದು ಕರೆಯಲಾಗದು ಎಂದು ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.

    ಮಾಜಿ ಸಂಸತ್ ಸದಸ್ಯ ಎನ್. ಸುರೇಶ್ ಬಾಬು ಮತ್ತು ಉದ್ಯಮಿ ಅವುತ್ತು ಶ್ರೀನಿವಾಸ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾ. ಡಾ. ವಿ.ಆರ್.ಕೆ. ಕೃಪಾಸಾಗರ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದೆ.

    ಆರೋಪಿಗಳಿಗೆ ಸಂವಿಧಾನದ ವಿಧಿ 20(3) ಸ್ವಯಂ ದೋಷಾರೋಣೆ ವಿರುದ್ಧದ ಹಕ್ಕು ಅಡಿಯಲ್ಲಿ ರಕ್ಷಣೆ ಒದಗಿಸಲಾಗಿದೆ. ಈ ಕಾರಣದಿಂದ ಗ್ಯಾಜೆಟ್ ಆನ್‌ಲೈನ್ ಖಾತೆಗಳ ಪಾಸ್‌ವರ್ಡ್‌ ನೀಡುವಂತೆ ಪೊಲೀಸರು ಆರೋಪಿಗಳಿಗೆ ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

    ಸದ್ರಿ ಪ್ರಕರಣದಲ್ಲಿ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ತನಿಖೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಒಪ್ಪಿಸಿರಲಿಲ್ಲ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಅಭಿಯೋಜನೆಯ ಪರ ವಕೀಲರು ವಾದಿಸಿದ್ದರು. ಮೊಬೈಲ್ ಫೋನ್ ನೀಡದೇ ಇದ್ದ ಕಾರಣ ಪ್ರಕರಣದಲ್ಲಿ ವಾಟ್ಸ್ಯಾಪ್ ಸಂದೇಶಗಳನ್ನು ಸಂಗ್ರಹಿಸಲು ಮತ್ತು ಅಪರಾಧದ ಗೂಗಲ್ ಟೈಮ್ ಲೈನ್ ಸಂಗ್ರಹಿಸಲು ಪೊಲೀಸರಿಗೆ ಆಗಲಿಲ್ಲ ಎಂದು ವಾದಿಸಲಾಗಿತ್ತು.

    ಆದರೆ, ಫೋನ್ ವಶಕ್ಕೆ ಪಡೆದುಕೊಳ್ಳಲಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಹೊರತುಪಡಿಸಿ ಉಳಿದ ಎಲೆಕ್ಟ್ರಾನಿಕ್ ಸಾಕ್ಷ್ಯ ಪಡೆಯಲು ಹಿಂಜರಿಯುವಂತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

    ಅರ್ಜಿದಾರರ ಉದ್ಯೋಗ, ನಿವಾಸ ಮತ್ತು ಇಷ್ಟು ವರ್ಷದಲ್ಲಿ ತನಿಖೆಗೆ ಲಭ್ಯ ಇರುವುದನ್ನು ಗಮನಿಸಿದರೆ, ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸುವ ಸಾಧ್ಯತೆ ಇಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ.

    Post Views: 213

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.