Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು- ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ
    ಇತ್ತೀಚಿನ ಸುದ್ದಿ

    ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು- ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

    March 21, 2026
    Share

    ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ.

    ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ದೂರು ನೀಡಿರುವುದು ದುರುದ್ದೇಶದಿಂದ ಕೂಡಿದೆ ಎಂದು ರೆಡ್ಡಿ ಹೇಳಿದ್ದಾರೆ.

    ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳಾದರೂ, ಇನ್ಸ್ ಪೆಕ್ಟರ್ ಆಡಿಯೋ, ವಿಡಿಯೋದಲ್ಲಿ ಅಸಭ್ಯವಾಗಿ ಕಾಣಿಸಿಕೊಂಡಿದ್ದಕ್ಕೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ಅಮಾನತು ಕ್ರಮ ಜರುಗಿಸಲಾಗಿದೆ. ಕೆಲವು ಎಡವಟ್ಟು, ಹಳೆಯ ತಪ್ಪುಗಳಿಂದಾಗಿ ಅವರ ಮೇಲೆ ಸುಳ್ಳು ಆರೋಪಗಳು ಕೇಳಿಬಂದಿದೆ. ಈ ರೀತಿಯ ತಪ್ಪುಗಳು ಮಾಡಿಲ್ಲದೇ ಇರುತ್ತಿದ್ದರೆ ಇಂತಹ ಆಡಿಯೋ, ವಿಡಿಯೋಗಳು ಮುನ್ನೆಲೆಗೆ ಬರುತ್ತಿರಲಿಲ್ಲ. ಈ ತಪ್ಪುಗಳಿಗಾಗಿ ಬೆಲೆ ತೆರಲೇಬೇಕಾಗುತ್ತದೆ ಎಂದು ಹೇಳಿರುವ ಸುಧೀರ್ ರೆಡ್ಡಿ, ಇಲಾಖೆಯಲ್ಲಿ ಇಂತಹ ದುರ್ನಡತೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಠಾಣೆಗೆ ಬರುವ ಮಹಿಳೆಯರ ಜೊತೆಗೆ ವ್ಯವಹರಿಸುವಾಗ ಜಾಗ್ರತೆ ಇರಬೇಕು ಮತ್ತು ಭವಿಷ್ಯದಲ್ಲಿ ಇಂತಹ ವಿಡಿಯೋಗಳು ಬರದಂತೆ ನೋಡಿಕೊಳ್ಳಬೇಕು ಎಂದು ಕಮಿಷನರ್ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    Post Views: 222

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.