Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ; ಗರ್ಭಿಣಿ ಮಹಿಳೆ ಸೇರಿದಂತೆ ಪತಿ ಸಜೀವ ದಹನ….!!
    ಇತ್ತೀಚಿನ ಸುದ್ದಿ

    ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ; ಗರ್ಭಿಣಿ ಮಹಿಳೆ ಸೇರಿದಂತೆ ಪತಿ ಸಜೀವ ದಹನ….!!

    February 2, 2023
    Share

    ಕೇರಳ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ.

    ಮೃತ ದಂಪತಿಗಳನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ.

    ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
    ಪ್ರಜಿತ್ ಮತ್ತು ರೀಶಾ ಇಬ್ಬರೂ ಕಾರಿನ ಮುಂದಿನ ಸೀಟ್ ನಲ್ಲಿ ಕುಳಿತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಮಗು ಸೇರಿದಂತೆ ಇನ್ನೂ ನಾಲ್ವರು ಪ್ರಯಾಣಿಕರಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡಾಗ ಆ ನಾಲ್ವರು ಕಾರಿನಿಂದ ಜಿಗಿದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಬೆಂಕಿ ಹೊತ್ತಿಕೊಂಡಾಗ ಕಾರು ಚಲಾಯಿಸುತ್ತಿದ್ದ ಪ್ರಜಿತ್ ಹಿಂಬಾಗಿಲು ತೆರೆದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಪಾರಾಗಲು ಸಹಾಯ ಮಾಡಿದ್ದಾರೆ. ಆದರೆ ತಾವು ಪಾರಾಗಲು ಮುಂದಿನ ಬಾಗಿಲು ತೆರೆಯಲು ಯತ್ನಿಸಿ ವಿಫಲವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಬೆಂಬಲದೊಂದಿಗೆ ಜಾಮ್ ಆಗಿದ್ದ ಮುಂಭಾಗದ ಬಾಗಿಲು ಒಡೆದಿದ್ದಾರೆ. ಆದರೆ, ಅಷ್ಟರಲ್ಲಿ ಪ್ರಜಿತ್ ಮತ್ತು ರೀಶಾ ಸಜೀವ ದಹನವಾಗಿದ್ದಾರೆ.

    Post Views: 170

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.