ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31ರ ಗುರುವಾರ ಮುಂಜಾನೆ ಇಲ್ಲಿನ ಬೆಳುವಾಯಿ ಎಂಬಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸಂತೋಷ್ ಇಂದು ಮುಂಜಾನೆ ತಮ್ಮ ಪಕ್ಕದ ಮನೆಯಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಗೆ ಆಧಾರ ಸ್ತಂಭವಾಗಿದ್ದ ಇವರು ಮೂಡುಬಿದಿರೆಯಲ್ಲಿ 88 ಎಲೆಕ್ಟ್ರೋ ವರ್ಲ್ಡ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಇವರು ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.