Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ
    ಇತ್ತೀಚಿನ ಸುದ್ದಿ

    ‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ

    October 27, 2022
    Share

    ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು.

    ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಾಧಿಯಾಗಿ ಎಲ್ಲಿರಿಗೂ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. 46 ದೇಶ, 26 ರಾಜ್ಯಗಳಿಂದ 1.10 ಕೋಟಿ ಜನರು ಕಾರ್ಯಕ್ರಮದಲ್ಲಿ ಹಾಡೋದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು, ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಅಕ್ಟೋಬರ್ 28ರಂದು ಆಯೋಜಿಸಲಾಗಿದೆ. ಕೋಠಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕ್ಯೂ ಆರ್ ಕೋಡ್ ಮೂಲಕ 1.10 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ಕೋಟಿ ಕಂಠ ಗಾಯನ ಕಾರ್ಯಕ್ರಮವು ಕನ್ನಡ ಭಾಷೆ, ಜನರ ಮನಸ್ಸನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. ಈ ಪ್ರಯತ್ನಕ್ಕೆ 46 ದೇಶಗಳು, 26 ರಾಜ್ಯಗಳಿಂದ ಜನರು ನೋಂದಣಿ ಮಾಡಿಕೊಂಡಿದ್ದಾರೆ. 10 ಸಾವಿರ ಸ್ಥಳಗಳಲ್ಲಿ ಒಂದು ಕೋಟಿ ಜನರು ಏಕಕಾಲಕ್ಕೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಡಲಿದ್ದಾರೆ. ಶಿಕ್ಷಣ, ಉನ್ನತ ಶಿಕ್ಷಣ, ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಕೂಡ ಕೈಜೋಜಿಸಿವೆ ಎಂದರು.

    ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 28ರಂದು ನಡೆಯಲಿರುವಂತ ಗಾಯನ ಕಾರ್ಯಕ್ರಮದಲ್ಲಿ 50 ಸಾವಿರ ಜನರು ಒಟ್ಟಿಗೆ ಹಾಡಲಿದ್ದಾರೆ. ಕಾರ್ಖಾನೆ, ಆಸ್ಪತ್ರೆ, ರಿಕ್ಷಾ ನಿಲ್ದಾಣ, ಅಪಾರ್ಮೆಂಟ್, ವಿಧಾನಸೌಧ, ಮೈಸೂರು ಅರಮನೆ, ಚಿತ್ರದುರ್ಗ ಕೋಟೆ, ಬೀದರ್ ಗುರುದ್ವಾರ, ಬಾದಾಮಿ, ಜೋಗ ಜಲಪಾತ, ಸಮುದ್ರ ಕಿನಾರೆ, ಏರ್ ಪೋರ್ಟ್ ಸೇರಿ ಎಲ್ಲಾ ಕಡೆ ನಡೆಯಲಿದೆ ಎಂಬುದಾಗಿ ಸಚಿವ ಸುನೀಲ್ ಕುಮಾರ್ ತಿಳಿಸಿದರು.

    Post Views: 259

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.