ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿರುದ್ದ ಎನ್ ಡಿಪಿಎಸ್ ಕಾಯ್ದೆಯಡಿ ಗೂಂಡಾ ಕಾಯ್ದೆಯಡಿಯ ಹೈಕೋರ್ಟ್ ಬಂಧನ ಆದೇಶವನ್ನು ಎತ್ತಿ ಹಿಡಿದಿದೆ.
ಜಿಲ್ಲೆಯಲ್ಲೇ ಮೊದಲ ಬಾರಿಗೆ ಎನ್ಡಿಪಿಎಸ್ ಕಾಯ್ದೆಯಡಿ ಇಬ್ಬರನ್ನು ಬಂಧಿಸಲಾಗಿದ್ದು, ಕುಖ್ಯಾತ ಗರುಡ ಗ್ಯಾಂಗ್ನ ಸಕ್ರೀಯ ಸದಸ್ಯ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಮತ್ತು ಕೃಷ್ಣ ಆಚಾರಿ ಅಲಿಯಾಸ್ ಕೃಷ್ಣ ಜಲಗಾರ ವಿರುದ್ದ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ.
ಗರುಡ ಗ್ಯಾಂಗ್ ಸದಸ್ಯ ಹಾಗೂ ಉಡುಪಿ ಸೇರಿ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ವಿರುದ್ದ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲು ಮನವಿ ಸಲ್ಲಿಸಲಾಗಿತ್ತು.
ಈತನ ವಿರುದ್ಧ 2005ನೇ ಸಾಲಿನಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಎಂಟು ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆ, ಮೂರು ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದ್ದು, 02 ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿದ್ದು, ಇನ್ನುಳಿದ 02 ಪ್ರಕರಣಗಳು ತನಿಖೆಯಲ್ಲಿವೆ. ಸದ್ಯ ಈತ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ.
ಮತ್ತೋರ್ವ ಆರೋಪಿ ಬ್ರಹ್ಮಾವರ ಠಾಣಾ ಸರಹದ್ದಿನ ಕೃಷ್ಣ ಆಚಾರಿ ವಿರುದ್ಧ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಇನ್ನುಳಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿದೆ.




