ಬಂಟ್ವಾಳ: ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಿನ್ನೆ (ಏ.12) ನಡೆದಿದೆ.

ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಗೇಶ್ ಪೂಜಾರಿ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕನಾಗಿ ದುಡಿಯುತ್ತಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.