Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ ಜಿಲ್ಲೆಯಲ್ಲಿ ನಾಳೆ ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ
    ಇತ್ತೀಚಿನ ಸುದ್ದಿ

    ದ.ಕ ಜಿಲ್ಲೆಯಲ್ಲಿ ನಾಳೆ ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    September 28, 2023
    Share

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ.

    ಸಾಮಾನ್ಯವಾಗಿ ಈ ಹಿಂದಿನ ಅನೇಕ ದಶಕಗಳ ಬೆಳವಣಿಗೆಗಳನ್ನು ಗಮನಿಸಿದಾಗ ಕರ್ನಾಟಕದ ನೆಲ ಜಲ ಪರ ಹೋರಾಟಗಳಿಗೆ ಕರಾವಳಿ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಕಾವೇರಿ ಪರ ಹೋರಾಟ, ಕನ್ನಡ ಪರ ಹೋರಾಟ, ಮೇಕೆದಾಟು, ಸೇರಿದಂತೆ ನೆಲ ಜಲ ಭಾಷೆಗೆ ಸಂಬಂಧಿಸಿದ ಕರ್ನಾಟಕದ ಹೋರಾಟಗಳಿಗೆ ಕರಾವಳಿ ಭಾಗ ಅರ್ಥಾತ್ ತುಳುನಾಡಿನಲ್ಲಿ ಬೆಂಬಲ ವ್ಯಕ್ತವಾಗೋದಿಲ್ಲ.

    ಅದರ ಜೊತೆಗೆ ತುಳುನಾಡು ಪರ ಹೋರಾಟಗಳಿಗೂ ಕೂಡ ಕರಾವಳಿ ಹೊರತುಪಡಿಸಿ ಇತರ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಉದಾಃ ತುಳು ಭಾಷೆ, ಎತ್ತಿನಹೊಳೆ ಹೋರಾಟ, ಕಂಬಳ ಸೇರಿದಂತೆ ಇತರ ಹೋರಾಟಗಳಿಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಬಿಟ್ಟರೆ ಕರ್ನಾಟಕದ ಬೇರೆ ಭಾಗದಿಂದ ಹೇಳಿಕೊಳ್ಳುವಂತಹ ಮಟ್ಟಿಗೆ ಬೆಂಬಲ ವ್ಯಕ್ತವಾದ ಉದಾಹರಣೆ ಇಲ್ಲ.

    ಇದೀಗ ಈ ಬಾರಿಯ ಕಾವೇರಿ ಪರ ಹೋರಾಟದಲ್ಲೂ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ದಿನ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಮಾತನಾಡಿರುವ ಖಾಸಗಿ ಬಸ್ ಮಾಲಕರ ಸಂಘದ ಮುಖಂಡ ದಿಲ್ ರಾಜ್ ಆಳ್ವ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ, ಜಿಲ್ಲೆಯಲ್ಲಿ ಅಂದು ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

    ಅಲ್ಲದೇ, ತುಳುನಾಡಿನ ನಾಡು ನುಡಿ ಪರ ಹೋರಾಟಗಳಿಗೆ ಕನ್ನಡ ಪರ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ, ಹೀಗಾಗಿ ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿ ಖಾಸಗಿ ಬಸ್‌ಗಳ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.

    ದ.ಕ ಜಿಲ್ಲೆಯಲ್ಲಿ ಬಂದ್‌ಗೆ ಕೇವಲ ನೈತಿಕ ಬೆಂಬಲ ಮಾತ್ರ ಎಂದಿರುವ ದಿಲ್‌ರಾಜ್ ಆಳ್ವ, ಬಂದ್, ಪ್ರತಿಭಟನೆ ಮಾಡಿ ಬಂದ್‌ಗೆ ಬೆಂಬಲವನ್ನು ನೀಡೋದಿಲ್ಲ. ಎತ್ತಿನಹೊಳೆ ವಿಚಾರದಲ್ಲಿ ಕನ್ನಡ ಸಂಘಟನೆಗಳ ಬೆಂಬಲ ಕೇಳಿದ್ದೆವು. ಆಗ ನೀರು ಎಲ್ಲರ ಹಕ್ಕು ಎಂದು ಹೇಳಿ ಬೆಂಬಲ ನೀಡಿಲ್ಲ ಎಂದರು.

    ತುಳು ಭಾಷೆ ವಿಚಾರದ ಹೋರಾಟದಲ್ಲಿ ನಮಗೆ ಬೆಂಬಲ ಸಿಕ್ಕಿಲ್ಲ, ತುಳು ಭಾಷೆ ಬಗ್ಗೆ ಚರ್ಚೆ ಆದಾಗ ಆ ಭಾಗದ ಶಾಸಕರು ತಮಾಷೆ ಮಾಡಿದ್ದರು. ಎತ್ತಿನ ಹೊಳೆ ಅವೈಜ್ಞಾನಿಕ ಅಂತಾ ಗೊತ್ತಿದ್ದರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿಲ್ಲ. ಹೀಗಾಗಿ ಕರ್ನಾಟಕ ಬಂದ್‌ಗೆ ನಮ್ಮ ನೈತಿಕ ಬೆಂಬಲ ಮಾತ್ರವೇ ಇದೆ. ಬಸ್ ಗಳ ಓಡಾಟ ಸೇರಿ ಎಲ್ಲವೂ ಅಂದು ಯಥಾಸ್ಥಿತಿಯಲ್ಲಿ ಇರಲಿದೆ ದಿಲ್ ರಾಜ್ ಆಳ್ವ ಹೇಳಿದ್ದಾರೆ.

    Post Views: 243

    Related Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.