Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಲೋಕಸಭಾ ಚುನಾವಣೆ: ಸೌಜನ್ಯಾಪರ ಹೋರಾಟಗಾರರ ವತಿಯಿಂದ ನೋಟಾ ಜಾಗೃತಿ ಅಭಿಯಾನ
    Uncategorized

    ಲೋಕಸಭಾ ಚುನಾವಣೆ: ಸೌಜನ್ಯಾಪರ ಹೋರಾಟಗಾರರ ವತಿಯಿಂದ ನೋಟಾ ಜಾಗೃತಿ ಅಭಿಯಾನ

    April 5, 2024
    Share

    ಮಂಗಳೂರು: ಅತ್ಯಾಚಾರ ಮತ್ತು ಹತ್ಯೆಗೊಳಗಾದ ಸೌಜನ್ಯಾ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಸೌಜನ್ಯಾಪರ ಹೋರಾಟಗಾರರು ನೋಟಾ ಜಾಗೃತಿ ಅಭಿಯಾನಕ್ಕೆ ಮುಂದಾಗಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ.

    ಆದರೂ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ಯಾವುದೇ ಸಹಕಾರ ನೀಡಿಲ್ಲ. ಅಲ್ಲದೆ ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಪದ್ಮಲತಾ, ಆನೆ ಮಾವುತ, ವೇದವಲ್ಲಿ ಕೊಲೆ ಪ್ರಕರಣಗಳಿಗೂ ನ್ಯಾಯ ದೊರಕಬೇಕೆಂದು ಚುನಾವಣಾ ಆಯೋಗದ ನಿರ್ದೇಶನದಂತೆ ನೋಟಾ ಜನಜಾಗೃತಿ ಸಭೆಗಳನ್ನು ನಡೆಸಿ ಅತೀ ಹೆಚ್ಚು ನೋಟಾಕ್ಕೆ ಮತ ಬೀಳುವಂತೆ ಕರೆ ನೀಡಲಾಗುತ್ತದೆ.

    ಇದಕ್ಕಾಗಿ ಸೌಜನ್ಯಾಪರ ಹೋರಾಟದ ರೂವಾರಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ ಅಭಿಯಾನ ನಡೆಸಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ ಮತ ಬೀಳವಂತೆ ಕರೆ ನೀಡಲಾಗುತ್ತದೆ. ಇದಕ್ಕಾಗಿ ಮನೆಮನೆಗಳಿಗೆ ತೆರಳಿ ನೋಟಾಕ್ಕೆ ಮತ ಹಾಕುವಂತೆ ವಿನಂತಿಸಲಾಗುತ್ತದೆ‌.

    ಅಲ್ಲಲ್ಲಿ ಸಭೆಗಳನ್ನು ನಡೆಸಲಾಗುತ್ತದೆ. ಎಪ್ರಿಲ್ 24ರಂದು ಸುಳ್ಯದಲ್ಲಿ ಲೋಕಸಭಾ ಕ್ಷೇತ್ರ ಮಟ್ಟದ ಬೃಹತ್ ನೋಟಾ ಜನಜಾಗೃತಿ ಸಭೆ ನಡೆಸಲಾಗುತ್ತದೆ. ರಾಷ್ಟ್ರೀಯ ಪಕ್ಷಗಳ ಹಾಗೂ ನ್ಯಾಯಾಂಗದ ಗಮನ ಸೆಳೆಯಲು ಈ ಅಭಿಯಾನ ನಡೆಸಲಾಗುತ್ತದೆ‌. ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೋಟಾ ಮತ ಚಲಾವಣೆ ಆದರೆ ವ್ಯವಸ್ಥೆಯ ಗಮನ ಸೆಳೆಯಲು ಸಾಧ್ಯ ಎಂಬುದು ಹೋರಾಟಗಾರರ ಅಭಿಪ್ರಾಯ.

    Post Views: 293

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.