Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
    ಕರಾವಳಿ ಸುದ್ದಿ

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    June 26, 2025
    Share

    ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ.

    ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ, ಕುಂದಾಪುರದ ಸೈಂಟ್ ಮೇರಿ ಶಾಲೆ, ಕುಂದಾಪುರದ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆ ಮತ್ತು÷ಕೊಸ್ಮೊಪೊಲಿಟನ್ ಹಿರಿಯ ಪ್ರಾಥಮಿಕ ಶಾಲೆ, ಮಂಗಳೂರಿನ ಕೂಳೂರು ಪ್ರೌಢಶಾಲೆ, ಬಿಜೈಯ ಸೈಂಟ್ ಅಂಜೆಲಾ ಹೋಂ, ಡಿ ಮರ್ಸಿಡ್ ಅನಾಥಾಶ್ರಮ, ಪಾನೀರ್, ಪಾಲಡ್ಕದ ಸೈಂಟ್ ಇಗ್ನೇಷಿಯಸ್ ಲೊಯೊಲಾ ಶಾಲೆ, ಜೆಪ್ಪುವಿನ ಸೈಂಟ್ ರೀಟಾ ಹಿರಿಯ ಪ್ರಾಥಮಿಕ ಶಾಲೆ, ಉರ್ವಾದದ ಲೇಡಿಹಿಲ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪುತ್ತೂರಿನ ಮಾಯ್ ದೆ ದೆವೂಸ್ ಹಿರಿಯ ಪ್ರಾಥಮಿಕ ಶಾಲೆಯ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾ ಬ್ಯಾಗ್ ಮತ್ತು ಕೊಡೆಗಳನ್ನು ವಿತರಣೆ ಮಾಡಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು.
    ಬ್ಯಾಂಕಿನ ಈ ಉದಾತ್ತ ಕಾರ್ಯಕ್ಕೆ ಮೇಲ್ಕಂಡ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಬಡ ಮಕ್ಕಳು ಮತ್ತು ಆಶ್ರಮದ ನಿವಾಸಿಗಳ ಬಗ್ಗೆ ಔದಾರ್ಯ ಮತ್ತು ಕಾಳಜಿಯನ್ನು ತೋರಿಸಿದ್ದಕ್ಕಾಗಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸಿದರು.
    ಈ ಹೃದಯಸ್ಪರ್ಶಿ ಕೊಡುಗೆಗಳ ಮೂಲಕ, ಎಮ್.ಸಿ.ಸಿ. ಬ್ಯಾಂಕ್ ತನ್ನ ಸಹಾನುಭೂತಿ ಮತ್ತು ಸೇವೆಯ ಮೂಲ ಮೌಲ್ಯಗಳನ್ನು ಪ್ರದರ್ಶಿಸಿದೆ. ಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್‌ಬುಕ್‌ಗಳ ವಿತರಣೆಯು ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯವಾದ ಬೆಂಬಲವನ್ನು ನೀಡುವುದಲ್ಲದೆ, ಕೃತಜ್ಞತೆ ಮತ್ತು ಪರಿಶ್ರಮದ ಸಂಸ್ಕೃತಿಯನ್ನು ಪ್ರೇರೇಪಿಸಿತು. ಎಮ್.ಸಿ.ಸಿ. ಬ್ಯಾಂಕ್ ಇಂತಹ ಅರ್ಥಪೂರ್ಣ ಸಂಪರ್ಕದ ಮೂಲಕ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ಸಮುದಾಯವನ್ನು ಬಲಪಡಿಸಲು ಬದ್ಧವಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆAದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿಕ್ಷಣದಲ್ಲಿ ಸಮಾನತೆಯನ್ನು ಅವರು ಒತ್ತಿ ಹೇಳಿದರು ಮತ್ತು ಆತ್ಮ ವಿಶ್ವಾಸವನ್ನು ಪ್ರೋತ್ಸಾಹಿಸಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು. ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆಂಬಲಿಸುವ ಎಂಸಿಸಿ ಬ್ಯಾಂಕಿನ ಧ್ಯೇಯವನ್ನು ಪುನರುಚ್ಚರಿಸಿದರು.

    ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ, ಶ್ರೀ ಎಲ್‌ರೊಯ್ ಕಿರಣ್ ಕ್ರಾಸ್ಟೊ, ಶ್ರೀ ಸುಶಾಂತ್ ಸಲ್ಡಾನಾ, ಶ್ರೀಮತಿ ಶರ್ಮಿಳಾ ಮಿನೇಜಸ್, ಶ್ರೀಮತಿ ಐರಿನ್ ರೆಬೆಲ್ಲೊ, ಶ್ರೀ ರೋಶನ್ ಡಿಸೋಜಾ, ಶ್ರೀ ಹೆರಾಲ್ಡ್ ಜೆ. ಮಾಂತೆರೊ, ಶ್ರೀ ಜೆ.ಪಿ. ರೋಡ್ರಿಗಸ್, ಶ್ರೀ ಅಂಡ್ರೂ÷್ಯ ಡಿಸೋಜ ಮತ್ತು ಕುಂದಾಪುರ, ಬ್ರಹ್ಮಾವರ, ಅಶೋಕನಗರ, ಕಂಕನಾಡಿ, ಮಾರ್ಗನ್ಸ್ಗೇಟ್, ಪುತ್ತೂರು ಮತ್ತು ಉಳ್ಳಾಲ ಶಾಖೆಗಳ ಶಾಖಾ ವ್ಯವಸ್ಥಾಪಕ ಕೂಡ ಭಾಗವಹಿಸಿದ್ದರು.

    Post Views: 208

    CommunityService MCCBankInitiative SchoolKitDistribution StudentSupport

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.