ಬೆಂಗಳೂರು; ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಸಿದ್ದಾಪುರ ಮಹೇಶ್ನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ್, ಸುನೀಲ್ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಲ್ಸನ್ಗಾರ್ಡನ್ ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿತ್ತು. 2020 ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್ ಕೊಲೆ ಕೇಸ್ನಲ್ಲಿ ಭಾಗಿಯಾಗಿ ಮಹೇಶ್ ಜೈಲು ಸೇರಿದ್ದ.ಆತನ ಜೈಲಿನಿಂದ ಹೊರ ಬರಲು ಕಾಯಿತ್ತಿದ್ದ ಗ್ಯಾಂಗ್ ಜೈಲಿನಿಂದ ಬರುವಾಗಲೇ ಕಾರು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ.
ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಐಪಿಸಿ ಸೆಕ್ಷನ್ 302, 120ಬಿ, 143, 147, 148, 343, 327, 149ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.