Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಡಿಕೆ ಕಳ್ಳತನ : ಮೂವರ ಬಂಧನ….!!
    ಇತ್ತೀಚಿನ ಸುದ್ದಿ

    ಅಡಿಕೆ ಕಳ್ಳತನ : ಮೂವರ ಬಂಧನ….!!

    March 30, 2024
    Share

    ಕುಂದಾಪುರ: ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳು ಅಮೀರ್ ಝನುದ್ದೀನ್ (23), ಗುಲ ಮ್ಮದ್ ಮುನಾವರ್ (21), ನಿಸಾರ್ @ ಆಸೀಫ್ ಅನ್ನಾರ್ (24) ಎಂದು ತಿಳಿದು ಬಂದಿದೆ.

    ಪೊಲೀಸರು ಆರೋಪಿಗಳನ್ನು ಬಂಧಿಸಿ‌, ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ್ದಾರೆ. 

    ಪ್ರಕರಣ ಸಾರಾಂಶ:

    ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ  ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24),  ಉಸ್ಮಾನ್ ನಗರ, , ಭಟ್ಕಳ ತಾಲೂಕು ಇವರನ್ನು ದಿನಾಂಕ: 28/03/2024 ರಂದು ದಸ್ತಗಿರಿ ಮಾಡಿ ಅವರುಗಳಿಂದ 11.25 ಕ್ವಿಂಟಾಲ್ ಸಿಪ್ಪೆ ಅಡಿಕೆ , 40 ಕೆ.ಜೆ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ  KA-47-9135 ನಂಬ್ರ ಪಿಕ್ಆಪ್ ವಾಹನ ಹಾಗೂ KA-20-ET-6215 ನೇ ನಂಬ್ರದ ಸ್ಕೂಟರ್  ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ಮೌಲ್ಯ 4,05,750/- ರೂಪಾಯಿ ಆಗಬಹುದು. ಪ್ರಕರಣದ ಪತ್ತೆ ಕಾರ್ಯದಲ್ಲಿ ನಾಸೀರ್ ಹುಸೇನ್ ಪಿಎಸ್ಐ (ಕಾ.ಸು) ಮತ್ತು  ಶಂಭುಲಿಂಗಯ್ಯ ಎಮ್.ಇ. ಪಿಎಸ್ಐ (ತನಿಖೆ) ಶಂಕರನಾರಾಯಣ ಠಾಣೆ, ಸಿಬ್ಬಂದಿಗಳಾದ  ಪುನೀತ್ ಕುಮಾರ್, ಸಚಿನ್, ಲೋಹಿತ್ ಕುಮಾರ್, ಮೌನೇಶ್, ರಾಕೇಶ್, ಪ್ರಕಾಶ್,  ರಾಘವೇಂದ್ರ, ಮಂಜುನಾಥ್ ಭಾಗವಹಿಸಿರುತ್ತಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.