Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 24, 2025
    Share

    ಮಂಗಳೂರು: ನಗರದ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಅವಧಿ ಮೀರಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಾರ್ ಮಾಲಕ, ಸಿಬ್ಬಂದಿ ಮತ್ತು ಗ್ರಾಹಕರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕ, ಮ್ಯಾನೇಜರ್ ಪ್ರವೀಣ್, ಸಿಬ್ಬಂದಿ ಅನ್ವಿತ್, ಗ್ರಾಹಕರಾಗಿದ್ದ ಪ್ರೀತೇಶ್, ಪರೇಶ್ ಮತ್ತು ಇನ್ನೊಬ್ಬ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉರ್ವ ಠಾಣೆಯ ಎಸ್ಸೈ ಗುರಪ್ಪಕಾಂತಿ ಪೊಲೀಸ್ ಸಿಬ್ಬಂದಿಯ ಜತೆ ಸೆ.21ರಂದು ರಾತ್ರಿ 12:10ಕ್ಕೆ ಕರ್ತವ್ಯದಲ್ಲಿ ರುವಾಗ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ಒಂದರ ಮುಖ್ಯದ್ವಾರ ಮುಚ್ಚಿದ್ದರೂ ಒಳಗಡೆ ಗ್ರಾಹಕರು ಇರುವುದನ್ನು ಕಂಡು ಪ್ರಶ್ನಿಸಿದ್ದಾರೆ. ಬಾಗಿಲು ತೆರೆಯುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಆದರೆ ಬಾಗಿಲು ತೆರೆದಿಲ್ಲ. ರಾತ್ರಿ 12:55ಕ್ಕೆ ಬಾರ್ ಮ್ಯಾನೇಜರ್ ಪ್ರವೀಣ್ ಕರೆ ಮಾಡಿದ ಬಳಿಕ ಒಳಗಡೆ ಇದ್ದ ಸಿಬಂದಿ ಅನ್ವಿತ್ ಎಂಬಾತ ಬಾಗಿಲು ತೆರೆದಿದ್ದಾನೆ. ಯಾಕೆ ಸಮಯಕ್ಕೆ ಸರಿಯಾಗಿ ಬಂದ್ ಮಾಡಿಲ್ಲ, ಒಳಗೆ ಗ್ರಾಹಕರು ಇದ್ದಾರಾ ಎಂದು ಪೊಲೀಸರು ಪ್ರಶ್ನಿಸಿದಾಗ ಅವರಿಗೆ ಮದ್ಯ ನೀಡಿ ಹಿಂಬದಿಯ ಬಾಗಿಲಿನಿಂದ ಕಳುಹಿಸಿರುವುದಾಗಿ ತಿಳಿಸಿದ್ದಾನೆ. ಹಿಂಬದಿಯಿಂದ ಹೊರಟ ಯುವಕರು ದ್ವಿಚಕ್ರ ವಾಹನದಲ್ಲಿ ತೆರಳಲು ಮುಂದಾದಾಗ ಎಸ್ಸೈ ಗುರಪ್ಪ ಕಾಂತಿ ಸಿಬ್ಬಂದಿ ಲೇಖನ್ ಬಳಿ ಯುವಕರನ್ನು ತಡೆದು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆವಾಗ ಯುವಕರು ಪೊಲೀಸರನ್ನು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಗುರಪ್ಪಕಾಂತಿ ಮಧ್ಯಪ್ರವೇಶಿಸಿದಾಗ ಆರೋಪಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಲಾಗಿದೆ.

    ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.