Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಾರಾಷ್ಟ್ರದಲ್ಲಿ ಒಮಿಕ್ರೋನ್ BQ.1 ಪತ್ತೆ : ಮುನ್ನೆಚ್ಚರಿಕೆ ಕ್ರಮವಾಗಿ ʻಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ ʼ
    ಇತ್ತೀಚಿನ ಸುದ್ದಿ

    ಮಹಾರಾಷ್ಟ್ರದಲ್ಲಿ ಒಮಿಕ್ರೋನ್ BQ.1 ಪತ್ತೆ : ಮುನ್ನೆಚ್ಚರಿಕೆ ಕ್ರಮವಾಗಿ ʻಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ ʼ

    October 26, 2022
    Share

    ಬೆಂಗಳೂರು : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ನ ಒಮಿಕ್ರೋನ್ ತಳಿಯ ಹೊಸ ರೂಪಾಂತರಿ ಬಿಕ್ಯು.1 (Omicron BQ.1 ) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೈ ಅಲರ್ಟ್(High alert in Karnataka) ಘೋಷಿಸಲಾಗಿದೆ.

    ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.

    ಮಾಸ್ಕ್ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ, ಕೋವಿಡ್-19ರ ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

    ಏನಿದೆ ಮಾರ್ಗಸೂಚಿಯಲ್ಲಿ..?
    • ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದೆ.
    • ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ.
    • ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯುವಂತೆ ತಿಳಿಸಿದೆ.
    • ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.
    • ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವಂತೆ ತಿಳಿಸಿದೆ.
    • ಕೋವಿಡ್19 ಲಸಿಕೆಯ ಬೂಸ್ಟರ್, ಮುಂಜಾಗ್ರತಾ ಡೋಸ್ ಲಸಿಕೆ ಬಾಕಿ ಇರುವವರು ಕೂಡಲೇ ಬಡೆಯುವಂತೆ ತಿಳಿಸಿದೆ.
    • ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿದೆ.
    • ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳುವುದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯವುದು.
    • ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವಂತೆ ತಿಳಿಸಿದೆ.

    Post Views: 141

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.