Facebook Twitter Instagram
    Sunday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿದ ಯುವತಿ -ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಆಕ್ರೋಶ
    ಇತ್ತೀಚಿನ ಸುದ್ದಿ

    ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿದ ಯುವತಿ -ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಆಕ್ರೋಶ

    October 27, 2022
    Share

    ಮಂಗಳೂರು: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ  ಸಿನಿ ಜಗತ್ತಿನಲ್ಲಿ ಹವಾ ಸೃಷ್ಟಿಸಿದ್ದು ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸೋಷಿಯಲ್‌ ಮೀಡಿಯಾಗಳಲ್ಲಿ ಕಾಂತಾರ ಕುರಿತ ಪೋಸ್ಟ್‌, ರೀಲ್ಸ್‌ ಹಾಗೂ ವಿಡಿಯೋಗಳು ಸಾಕಷ್ಟು ಸದ್ದು ಮಾಡುತ್ತಿವೆ. ಆದರೆ ಯುವತಿಯೋರ್ವಳು ಇನ್ಸ್ಟಾಗ್ರಾಮ್‌ನಲ್ಲಿ ಮಾಡಿರುವ ರೀಲ್ಸ್‌ ಈಗ ವಿವಾದಕ್ಕೆ ಕಾರಣವಾಗಿದೆ. ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾಳೆ.

    ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿ ಯುವತಿ ರೀಲ್ಸ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಯುವತಿ ವಿರುದ್ದ ಆಕ್ರೋಶ ಕೇಳಿಬಂದಿದೆ. ಮೇಕಪ್ ಅರ್ಟಿಸ್ಟ್ ಆಗಿರೋ ಶ್ವೇತಾ ರೆಡ್ಡಿಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದಾರೆ. ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್‌ ಮಾಡಿ ಕ್ಷಮೆ ಕೇಳುವಂತೆ ಹಲವರು ಕಾಮೆಂಟ್‌ ಮಾಡಿದ್ದಾರೆ. ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಯುವತಿ ರೀಲ್ಸ್‌ ಡಿಲೀಟ್‌ ಮಾಡಿದ್ದಾಳೆ.

    “ತುಳುನಾಡಿನ ದೈವ ದೇವರುಗಳು ಎಂದರೆ ನಿಮಗೆ ಮನರಂಜನೆ ವಸ್ತು ಅನ್ಕೋಂಡ್ರ ಅವಿವೇಕಿಗಳೆ, ನಿಮ್ಮ ಲೈಕ್ ಕಮೆಂಟ್ ಫಾಲೋವರ್ಸ್ ಗಾಗಿ ನಮ್ಮ ನಂಬಿಕೆಗಳ ಜೊತೆಗೆ ಆಟವಾಡಬೇಡಿ ಮರ್ಯಾದೆಯಲ್ಲಿ ಪೋಸ್ಟ್ ಡಿಲೀಟ್ ಮಾಡಿ. ನಿಮ್ಮ ತೀಟೆಗೆ ನಮ್ಮ ನಂಬಿಕೆ ಬಳಸಿಕೊಳ್ಳಬೇಡಿ” ಎಂದು ಬಳಕೆದಾರರೊಬ್ಬರು ಕಾಮೆಂಟ್‌ ಮಾಡಿದ್ದಾರೆ.

    ಇನ್ನು ಫಾಲೋವರ್ಸ್‌ ಲೈಕ್ ಗೋಸ್ಕರ ನಮ್ಮ ದೈವ ದೇವರನ್ನು ಅವಮಾನ ಮಾಡಿದರೇ ಕಂಡಿತವಾಗಿಯು ನಾವು ಸುಮ್ಮನೆ ಇರಲ್ಲ, ಮರ್ಯಾದಿಯಿಂದ ಪೊಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದರೆ ಸರಿ…! ಇಲ್ಲದಿದ್ದರೆ ಮುಂದೆ ಆಗುವ ಎಲ್ಲ ಪರಿಣಾಮಕೇ ನೀವೇ ಹೊಣೆ” ಎಂದು ಮತ್ತೊಬ್ಬರು ಪೋಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶದ ಬಳಿಕ ಯುವತಿ ಇನ್‌ಸ್ಟಾಗ್ರಾಮ್‌ ಖಾತೆಯಿಂದ ರೀಲ್ಸ್‌ಗಳನ್ನು ಡಿಲೀಟ್‌ ಮಾಡಿದ್ದಾಳೆ.

    Post Views: 117

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.