Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ ನೀಡಿದ್ದಕ್ಕೆ- ನೀರಿನ ಬಾಟಲ್‌ನಲ್ಲಿ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು
    ಇತ್ತೀಚಿನ ಸುದ್ದಿ

    ಉಳ್ಳಾಲ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ ನೀಡಿದ್ದಕ್ಕೆ- ನೀರಿನ ಬಾಟಲ್‌ನಲ್ಲಿ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು

    October 7, 2023
    Share

    ಉಳ್ಳಾಲ: ಅಕ್ಟೋಬರ್ 6 ಗಣಿತ ಪರೀಕ್ಷೆಯಲ್ಲಿ‌ ಕಳಪೆ ಫಲಿತಾಂಶ ಪಡೆದಿದ್ದ‌ ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಹಪಾಠಿಯೊಂದಿಗೆ ಸೇರಿ ಪೇಪರ್ ತಿದ್ದಿದ್ದ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿದ್ದರ ಪರಿಣಾಮ ನೀರನ್ನ ಕುಡಿದಿದ್ದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದು ಘಟನೆಗೆ ಕಾರಣರಾದ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ಶಾಲಾಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಶಾಲಾ ಯುನಿಟ್ ಟೆಸ್ಟ್‌ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಪೇಪರ್ ತಿದ್ದಿದ್ದ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೆ ತಪ್ಪು ಹಾಕಿದ್ದಾರೆ ಅನ್ನುವ ಬಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಶಿಕ್ಷಕಿಯ ವಿರುದ್ಧ ಸೇಡು ತೀರಿಸಲು ತನ್ನ ಸಹಪಾಠಿಯ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ ಸ್ಟಾಫ್ ರೂಮ್‌ನಲ್ಲಿ ಯಾರೂ ಇಲ್ಲದ ಸಂದರ್ಭ ಬಳಸಿಕೊಂಡು ತಾನು ತಂದಿದ್ದ ಅವಧಿ ಮೀರಿದ್ದ ಮಾತ್ರೆಗಳನ್ನ ಗಣಿತ ಶಿಕ್ಷಕಿ ಬಳಸುತ್ತಿದ್ದ ನೀರಿನ ಬಾಟಲಿಗೆ ಹಾಕಿದ್ದಾಳೆ. ಗಣಿತ ಶಿಕ್ಷಕಿಯು ಬಾಟಲಿ ನೀರನ್ನು‌ ಕುಡಿದು ಅಸ್ವಸ್ಥಗೊಂಡಿದ್ದು,ಅದೇ ನೀರನ್ನ ಸೇವಿಸಿದ್ದ ಮತ್ತೋರ್ವ ಶಿಕ್ಷಕಿಯ ಮುಖ ಊದಿ ಕೊಂಡಿದೆ.ಅನುಮಾನಗೊಂಡ ಶಿಕ್ಷಕರು ನೀರಿನ ಬಾಟಲಿಯನ್ನ ಪರಿಶೀಲಿಸಿದಾಗ ನೀರಿನಲ್ಲಿ ಮಾತ್ರೆಗಳು ಕರಗಿರುವುದನ್ನ ಗಮನಿಸಿದ್ದಾರೆ. ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರ್ಥಿನಿಯರ ಕುಕೃತ್ಯ ಬೆಳಕಿಗೆ ಬಂದಿದೆ. ಪ್ರಾಥಮಿಕ ಶಿಕ್ಷಣದಲ್ಲೇ ಕ್ರೌರ್ಯ ತೋರಿದ ವಿದ್ಯಾರ್ಥಿನಿಯರ ನಡೆಗೆ ಶಾಲಾ ರಕ್ಷಕ-ಶಿಕ್ಷಕರು ನಿಬ್ಬೆರಗಾಗಿದ್ದಾರೆ‌. ವಿದ್ಯಾ ಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕವಲ್ಲದೆ ಸ್ಪರ್ಧಾತ್ಮಕವಾಗಿ ನಡೆಸುವುದಲ್ಲದೆ ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್‌ಗಳನ್ನಾಗಿಸುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸಿತ್ತಿದ್ದಾರೋ ಎಂದು ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.

    Post Views: 248

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.