ಉಳ್ಳಾಲ: ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲದ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
![](https://policepatrikekarnataka.com/wp-content/uploads/2023/12/WhatsApp-Image-2023-12-02-at-9.01.26-AM.jpeg?v=1701487935)
ಚಾಲಕ ಅತ್ಯಂತ ಸಾಹಸ ಪಟ್ಟು ವಾಹನದೊಳಗೆ ಹೊಗುವ ದೃಶ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಅಪಾಯಕಾರಿ ಸ್ಥಿತಿಯಲ್ಲಿ ವಾಹನವಿದ್ದು ಅದೇ ವಾಹನದಲ್ಲಿ ಕಸ ಸಂಗ್ರಹಕ್ಕೆ ಕಾರ್ಮಿಕರು ತೆರಳುತ್ತಾರೆ. ಈ ರೀತಿಯ ಅಪಾಯಕಾರಿ ವಾಹನಕ್ಕೆ ಅಫಘಾತವಾದರೆ ಯಾರು ಹೊಣೆ, ಕಾರ್ಮಿಕರ ಪ್ರಾಣಕ್ಕೆ ಬೆಲೆ ಇಲ್ಲವೇ..? ಅಧಿಕಾರಿಗಳು, ಶಾಸಕ ಯು.ಟಿ ಖಾದರ್ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತೆ ವಾಣಿ ವಿ ಆಳ್ವ ಪ್ರತಿಕ್ರಿಯೆ ನೀಡಿದ್ದು, ಈ ವಾಹನ ಏಳು ವರ್ಷ ಹಳೆಯದ್ದಾಗಿದ್ದು, ದುರಸ್ಥಿ ಮಾಡಲು ಅಸಾಧ್ಯವಾಗಿದೆ. ಹೊಸ ಆಟೋ ಟಿಪ್ಪರ್ ವಾಹನ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಬಗ್ಗೆ ಶಾಸಕ ಖಾದರ್ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ವಿಧಾನಸಭೆಯ ಸಭಾಧ್ಯಕ್ಷರ ತವರು ಕ್ಷೇತ್ರದಲ್ಲೇ ಆಡಳಿತ ವ್ಯವಸ್ಥೆ ಅವ್ಯವಸ್ಥೆಯ ಗೂಡಾಗಿದ್ದು, ಜನ ಛೀಮಾರಿ ಹಾಕುತ್ತಿದ್ದಾರೆ.