Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ
    ಇತ್ತೀಚಿನ ಸುದ್ದಿ

    ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

    August 11, 2024
    Share

    ಬೆಳ್ತಂಗಡಿ: ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಸಂಸದ್ ಭವನದ ಪ್ರಧಾನಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು. ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ, ದೇಶಕ್ಕೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಹೆಗ್ಗಡೆಯವರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಶ್ರೀ ಹೆಗ್ಗಡೆಯವರು ವಿವರಿಸಿದರು. ಇಲ್ಲಿಯವರೆಗೆ ಸುಮಾರು 3 ಕೋಟಿ ಸಿ.ಎಸ್.ಸಿ. ಸೇವೆಗಳು ಯೋಜನೆಯ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಮಂತ್ರಿಗಳು ಅಚ್ಚರಿ ವ್ಯಕ್ತಪಡಿಸಿದರು. ಹೆಗ್ಗಡೆಯವರ ಈ ಎಲ್ಲ ಕಾರ್ಯಗಳ ಚಿಂತನೆಯು ದೇಶಕ್ಕೆ ಮಾದರಿಯಾಗಲಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಬೀದರ್‌ನಲ್ಲಿ ಕ್ಷೀರಕ್ರಾಂತಿ: ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಯಾದ ಬೀದರ್‌ನಲ್ಲಿ ಕ್ಷೀರಕ್ರಾಂತಿ ಮಾಡುವ ಯೋಜನೆ ಹಾಕಿಕೊಂಡು ಕೆ.ಎಂ.ಎಫ್. ಸಹಯೋಗದೊಂದಿಗೆ ಅನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿದರು. ಈ ಮೂಲಕ ಹೈನುಗಾರಿಕೆ ಮಾಡಲು ಅನೇಕ ಪ್ರೋತ್ಸಾಹಗಳನ್ನು ನೀಡಿದ್ದಾರೆ. ಸಂಸದರ ನಿಧಿಯಿಂದ ಹಾಲು ಸಂಗ್ರಹಣಾ ಕಟ್ಟಡಗಳನ್ನು ನಿರ್ಮಿಸಿದ್ದಲ್ಲದೆ, ಹಾಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಲು ಅತ್ಯಾಧುನಿಕ ಯಂತ್ರಗಳಾದ ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಟಿಂಗ್ ಯುನಿಟ್(ಎ.ಎಂ.ಸಿ.ಯು.), ಸ್ಟೈನ್‍ಲೆಸ್ ಸ್ಟೀಲ್ ಕ್ಯಾನ್, ಪ್ಯಾಟೋಮ್ಯಾಟಿಕ್ ಯಂತ್ರ, ಹಾಲು ತೂಕದ ಯಂತ್ರಗಳನ್ನು ಒದಗಿಸಿರುತ್ತಾರೆ. ಯೋಜನೆಯ ಕೃಷಿ ಅಧಿಕಾರಿಗಳನ್ನು ನಿಯೋಜಿಸಿ ಗ್ರಾಮೀಣ ರೈತರರಿಗೆ ಹೈನುಗಾರಿಕೆಯ ಬಗ್ಗೆ ಸೂಕ್ತ ತರಬೇತಿಯನ್ನು ನೀಡಿದ್ದಾರೆ. ಈ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು. ಇದು ಯೋಜನೆಯಿಂದಾಗಿ ಪ್ರತಿ ದಿನ ಗರಿಷ್ಠ 60 ಸಾವಿರ ಲೀಟರ್‌ಗೆ ಏರಿಕೆ ಕಂಡಿದ್ದು ಕೆಲವೇ ತಿಂಗಳುಗಳಲ್ಲಿ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಸಂಗ್ರಹದ ಗುರಿಯನ್ನು ತಲುಪಲಿದೆ. ಆ ಮೂಲಕ ಇದೊಂದು ಐತಿಹಾಸಿಕ ಉತ್ಪಾದನೆಯಾಗಿರುತ್ತದೆ ಎಂದು ಹೆಗ್ಗಡೆಯವರು ಪ್ರಧಾನಿಗೆ ವಿವರಿಸಿದಾಗ ಸಂಸದರ ನಿಧಿಯ ಬಳಕೆಗೆ ಇದು ಒಂದು ಉತ್ತಮ ಮಾದರಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಆಯುಷ್ಮಾನ್ ಸೇವೆಗೂ ಮೆಚ್ಚುಗೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಮುನ್ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೇಂದ್ರ ಸರ್ಕಾರದ ತಂತ್ರಜ್ಞಾನ ಮತ್ತು ಮಾಹಿತಿ ವಿದ್ಯುನ್ಮಾನ ಸಚಿವಾಲಯದ ಮಹತ್ವದ ಕಾರ್ಯಕ್ರಮವಾದ ಸಿಎಸ್​ಸಿ ಸೇವೆಗಳನ್ನು ಜನ ಸಾಮಾನ್ಯರಿಗೆ ನೀಡುವ ಒಂದು ಪಾಲುದಾರಿಕಾ ಒಪ್ಪಂದವಾಗಿದೆ. ರಾಜ್ಯಾದ್ಯಂತ ಯೋಜನೆ 10 ಸಾವಿರ ಗ್ರಾಹಕ ಸೇವಾಕೇಂದ್ರಗಳ ಮೂಲಕ ಸಿಎಸ್​ಸಿ ಸೇವೆಯನ್ನು ಯಶಸ್ವಿಯಾಗಿ ಜನ ಸಾಮಾನ್ಯರಿಗೆ ನೀಡುತ್ತಿದೆ. ಆಯುಷ್ಮಾನ್ ಭಾರತ್ ಸರ್ಕಾರದ ಮಹತ್ವದ ಆರೋಗ್ಯ ವಿಮೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇದನ್ನು ಉಚಿತವಾಗಿ ಸಿಎಸ್​ಸಿ ಕೇಂದ್ರಗಳ ಮೂಲಕ ವಿತರಿಸಲಾಗಿದೆ. ಇಲ್ಲಿಯವರೆಗೆ 1.40 ಕೋಟಿಗೂ ಅಧಿಕ ಜನರು ಆಯುಷ್ಮಾನ್ ವಿಮೆಗೆ ನೋಂದಾಯಿಸಿ ಕೊಂಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಜನರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇವೆ ನೀಡುವ ಬಗ್ಗೆಯೂ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

    Post Views: 217

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.