Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

    September 22, 2023
    Share

    ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ.

    ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್ ಆದಿಲ್ ಮುಸ್ತಾಕ್ ವಿರುದ್ಧ ಕೇಳಿಬಂದಿದೆ.

    ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

    ಜುಲೈನಲ್ಲಿ ಬಂಧನಕ್ಕೆ ಒಳಗಾದ ಉಗ್ರನ ಮೊಬೈಲ್ ಫೋನ್ ಅನ್ನು ವಿಶ್ಲೇಷಿಸಿದಾಗ ಆತ ಆದಿಲ್ ಮುಷ್ತಾಕ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ. ಈ ಅಧಿಕಾರಿ, ಕಾನೂನಿನ ಕಣ್ಣು ತಪ್ಪಿಸುವುದು ಹೇಗೆ ಎಂದು ಉಗ್ರನಿಗೆ ಮಾರ್ಗದರ್ಶನ ನೀಡುತ್ತಿದ್ದರು. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆದಿಲ್ ಮುಷ್ತಾಕ್ ಟೆಲಿಗ್ರಾಂ ಆಯಪ್‌ನಲ್ಲಿ ಆರೋಪಿಯೊಂದಿಗೆ ಮಾತನಾಡುತ್ತಿದ್ದರು.

    ಉಗ್ರ ಮತ್ತು ಉಪ ಅಧೀಕ್ಷಕರ ನಡುವೆ ಕನಿಷ್ಠ 40 ಕರೆಗಳಿವೆ. ಬಂಧನದಿಂದ ತಪ್ಪಿಸಿಕೊಳ್ಳುವುದು ಮತ್ತು ಕಾನೂನು ನೆರವು ಪಡೆಯುವುದು ಹೇಗೆ ಎಂದು ಮಾರ್ಗದರ್ಶನ ನೀಡುತ್ತಿದ್ದರು ಎಂದು ತನಿಖೆಯ ಮೇಲ್ವಿಚಾರಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ತನಿಖಾ ಅಧಿಕಾರಿಯನ್ನು ಸಿಲುಕಿಸಲು ಉಗ್ರನ ಪರವಾಗಿ ಬಂಧಿತ ಅಧಿಕಾರಿ ಸುಳ್ಳು ದೂರನ್ನು ರಚಿಸಿದ್ದರು. ಉಗ್ರನಿಂದ ಆದಿಲ್ ಮುಷ್ತಾಕ್ 5 ಲಕ್ಷ ರೂ. ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಲಷ್ಕರ್ ಹಣಕಾಸು ನಿರ್ವಹಣೆಗಾಗಿ ಸೋಪೋರ್‌ನಲ್ಲಿ ನಕಲಿ ದಾಖಲೆಗಳ ಮೇಲೆ ಬ್ಯಾಂಕ್ ಖಾತೆ ತೆರೆದಿದ್ದ ಮುಝಾಮಿಲ್ ಜಹೂರ್‌ನೊಂದಿಗೆ ಅಧಿಕಾರಿ ನಿಕಟ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Post Views: 216

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.