Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿವಿಯ ಗಣೇಶೋತ್ಸವಕ್ಕೆ ಬರ್ತೇನೆ -ಅರೆಸ್ಟ್ ಮಾಡಿ ಪ್ರಭಾಕರ ಭಟ್ ಸವಾಲು
    ಇತ್ತೀಚಿನ ಸುದ್ದಿ

    ಮಂಗಳೂರು ವಿವಿಯ ಗಣೇಶೋತ್ಸವಕ್ಕೆ ಬರ್ತೇನೆ -ಅರೆಸ್ಟ್ ಮಾಡಿ ಪ್ರಭಾಕರ ಭಟ್ ಸವಾಲು

    September 10, 2023
    Share

    ಉಳ್ಳಾಲ : ನಾನು ಅರೆಸ್ಟ್ ಆಗದೆ ತುಂಬಾ ಸಮಯ ಆಯ್ತು. ಅರೆಸ್ಟ್ ಮಾಡಿದ್ರೆ ತುಂಬಾ ಸಂತೋಷ ಮಂಗಳೂರು ವಿವಿ ಮಂಗಳ ಸಭಾಂಗಣದಲ್ಲಿ ಗಣೇಶೋತ್ಸವ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ಮಂಗಳೂರು ವಿವಿ ಗಣೇಶೋತ್ಸವಕ್ಕೆ ವಿರೋಧ ಹಾಗೂ ಸ್ಟಾಲಿನ್ ಹೇಳಿಕೆ ಖಂಡಿಸಿ ಅಸೈಗೋಳಿಯ ಮೈದಾನದಲ್ಲಿ ಸಂಘ ಪರಿವಾರ ಹಮ್ಮಿಕೊಂಡ ಸಾಮೂಹಿಕ ಭಜನಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೊರಗಿನವರೆಂದರೆ ಯಾರು ಸ್ವಾಮಿ? ನಾವೆಲ್ಲರೂ ಗಣೇಶನ ಭಕ್ತರೇ ಅಲ್ವಾ? ಒಳಗಿರೋರು ಅಂದ್ರೆ ವಿದ್ಯಾರ್ಥಿಗಳು, ಅವರು ಬೇರೆ ಬೇರೆ ಜಾಗದಿಂದ ಬಂದವರು. ಇಡೀ ರಾಜ್ಯದಿಂದ ಅಲ್ಲಿಗೆ ಜನ ಬಂದಿರ್ತಾರೆ, ಇದರಲ್ಲಿ ಹೊರಗಿನವರು ಅಂತ ಇಲ್ಲ. ನಾವೆಲ್ಲರೂ ವಿವಿ ಗಣೇಶೋತ್ಸವಕ್ಕೆ ಬಂದೇ ಬರ್ತೇವೆ, ಅಲ್ಲಿ ಇರ್ತೇವೆ, ಅದರಲ್ಲಿ ಎರಡು ಪ್ರಶ್ನೆ ಇಲ್ಲ. ಬಂದರೆ ಏನು ಮಾಡ್ತಾರೆ, ಅರೆಸ್ಟ್ ಮಾಡ್ತಾರಾ? ಅರೆಸ್ಟ್ ಆಗದೇ ತುಂಬಾ ಸಮಯ ಆಯ್ತು.ಅರೆಸ್ಟ್ ಮಾಡಿದರೆ ಮಾಡಲಿ ಎಂದರು. ವಿವಿ ಅನ್ನೋದು ಹಿಂದೂ ಮೆಜಾರಿಟಿ ಇರೋ ಒಂದು ಸಂಸ್ಥೆ. ಅಲ್ಲಿ ದೇವರನ್ನು ಪೂಜೆ ಮಾಡಬಾರದು ಅಂದ್ರೆ ಏನರ್ಥ. ಸೆಕ್ಯೂಲರ್ ಹೆಸರಿನಿಂದ ಹಿಂದೂಗಳ ಜೀವನಕ್ಕೆ ತೊಂದರೆ ಆಗಿದೆ. ಅವರ ಮಸೀದಿ, ಮನೆಯಲ್ಲಿ ಅಲ್ಲಾನನ್ನೇ ಪೂಜೆ ಮಾಡಲಿ. ವಿವಿಯಲ್ಲೂ ಅಲ್ಲಾನನ್ನ ಪೂಜೆ ಮಾಡೋದಾದ್ರೆ ಮಾಡಲಿ ಇವರು ಹಿಂದೂ ವಿರೋಧಿ ಮಾತನಾಡುವ ಶಂಸುಲ್ ಇಸ್ಲಾಂಗೆ ಅವಕಾಶ ಕೊಡಲಿಲ್ವಾ? ಕಾಂಗ್ರೆಸ್ ಹಿಂದೂಗಳನ್ನ ನಿರ್ವೀರ್ಯರನ್ನಾಗಿ, ಹೇಡಿಗಳನ್ನಾಗಿ ಮಾಡಿತು. ಈಗಲೂ ಸ್ಟಾಲಿನ್ ಪುತ್ರ ಉದಯನಿಧಿ ಎಂಬ ಮಂತ್ರಿ ತನ್ನ ಕಂತ್ರಿ ಬುದ್ದಿ ತೋರಿಸಿದ. ಅದರ ಬಗ್ಗೆ ಏನೂ ಮಾತನಾಡದ ಕಾಂಗ್ರೆಸ್ ನಾಯಕರು ಅಂತವರ ಪರವಾಗಿಯೇ ನಿಲ್ಲುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Post Views: 218

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.