ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರು ಗಡಿಪಾಡು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತನಾಗಿದ್ದು ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.